AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ

2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಮ್ಯಾನೇಜರ್ ದಾಸೇಗೌಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ.

ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 21, 2021 | 9:20 PM

Share

ಚಿಕ್ಕಬಳ್ಳಾಪುರ: ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೆಐಎಡಿಬಿ ಕಚೇರಿಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭಾರತ್ ಸ್ಕೌಟ್ಸ್​ ಕಟ್ಟಡದಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸ್​ಎಲ್​ಒ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಕೆಐಎಡಿಬಿ ಮ್ಯಾನೇಜರ್ ದಾಸೇಗೌಡ ಎಸಿಬಿ ವಶವಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಲ್ಕಾಪುರದ ರೈತ ಬಾಲಕೃಷ್ಣರವರ ಜಮೀನು ಭೂಸ್ವಾಧೀನ ಹಾಗೂ 60 ಲಕ್ಷ ರೂಪಾಯಿ ಪರಿಹಾರ ಬಿಡುಗಡೆಗೆ 10.5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಇಂದು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಮ್ಯಾನೇಜರ್ ದಾಸೇಗೌಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ.

ಹೊರಗುತ್ತಿಗೆ ನೌಕರರ ನೇಮಕಾತಿಗೆ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಆಯುಷ್ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ನೇಮಕಾತಿ ಹಿನ್ನೆಲೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರಿ ನೇಮಕಾತಿಗಾಗಿ ಐವತ್ತು ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ. ಈ ವೇಳೆ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಸುಪರಿಂಟೆಡೆಂಟ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಲ್ಲಣ್ಣ ತೋಟದ ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಗಿರೀಶ್ ಕಂಬಳಿ ಆಯುಷ್ ಇಲಾಖೆ ಸುಪರಿಂಟೆಂಡೆಂಟ್ ಮುತ್ತಣ್ಣ ಹುಲಿಕೇರಿ ಎಂಬುವರಿಂದ ಲಂಚ ಪಡೆಯುತ್ತಿದ್ದರು. ಈ ಸಂದರ್ಭ, ಎಸಿಬಿ ಡಿವೈಎಸ್​ಪಿ ಎಮ್.ಕೆ ಗಂಗಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!

ಇದನ್ನೂ ಓದಿ: ಭೂಸ್ವಾಧೀನ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ; ಲಂಚ ಸ್ವೀಕರಿಸಿದ ಮೂವರು ಎಸಿಬಿ ಅಧಿಕಾರಿಗಳ ಬಲೆಗೆ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ