ಬೆಳಗಿನ ಜಾವ ಮನೆಗೆ ನುಗ್ಗಿ ಗ್ರಾ.ಪಂ. ಸದಸ್ಯನ ಮೇಲೆ ತಲ್ವಾರ್​ನಿಂದ ಹಲ್ಲೆ

ದಕ್ಷಿಣ ಕನ್ನಡ: ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ನುಗ್ಗಿ ತಲವಾರ್​ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಮೇರೆಮಜಲು ಎಂಬಲ್ಲಿ ಮುಂಜಾನೆ ನಡೆದಿದೆ. ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೌಡಿಶೀಟರ್ ಪ್ರಸಾದ್ ಬೆಳ್ಚಾಡ, ಆತನ ಸಹಚರರು ಹಲ್ಲೆ ಮಾಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಬೆಳಗಿನ ಜಾವ ಮನೆಗೆ ನುಗ್ಗಿ ಗ್ರಾ.ಪಂ. ಸದಸ್ಯನ ಮೇಲೆ ತಲ್ವಾರ್​ನಿಂದ ಹಲ್ಲೆ
ಸಾಧು ಶ್ರೀನಾಥ್​

Updated on: Nov 29, 2019 | 10:58 AM

ದಕ್ಷಿಣ ಕನ್ನಡ: ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ನುಗ್ಗಿ ತಲವಾರ್​ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಮೇರೆಮಜಲು ಎಂಬಲ್ಲಿ ಮುಂಜಾನೆ ನಡೆದಿದೆ.

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿಶೀಟರ್ ಪ್ರಸಾದ್ ಬೆಳ್ಚಾಡ, ಆತನ ಸಹಚರರು ಹಲ್ಲೆ ಮಾಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 8:41 am, Fri, 29 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us