AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: 9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ; ಸೊಸೆ ಆರೋಪ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆರಿಗೆಯಾದ 5 ತಿಂಗಳ ಬಳಿಕ ಪುರ್ತಗೇರಿ ಗ್ರಾಮದ ನಾಗರತ್ನ ಎಂಬುವರು ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ "ಇಷ್ಟು ಬೇಗ ಮಗು ಬೇಕಿತ್ತಾ" ಅಂತ ಪ್ರಶ್ನೆ ಮಾಡಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ

ಗದಗ: 9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ; ಸೊಸೆ ಆರೋಪ
ಸಾಂದರ್ಭಿಕ ಚಿತ್ರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 25, 2023 | 8:05 AM

Share

ಗದಗ ನ.25: ಒಂಬತ್ತು ತಿಂಗಳ ಹಸುಗೂಸಿಗೆ (Baby) ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಗಜೇಂದ್ರಗಡ (Gajendragad) ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ನವೆಂಬರ್ 22 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತೆ ಸರೋಜಾನೇ ನನ್ನ ಮಗುವನ್ನು ಕೊಲೆ ಮಾಡಿದ್ದಾರೆ ಎಂದು ಸೊಸೆ ನಾಗರತ್ನ ಆರೋಪಿಸಿದ್ದಾರೆ.

ಹೆರಿಗೆಯಾದ 5 ತಿಂಗಳ ಬಳಿಕ ನಾಗರತ್ನ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ “ಇಷ್ಟು ಬೇಗ ಮಗು ಬೇಕಿತ್ತಾ” ಅಂತ ಪ್ರಶ್ನೆ ಮಾಡಿದ್ದಾರೆ. ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಪತ್ನಿ ಕೊರಳನ್ನೇ ಕತ್ತರಿಸಿ ಕೊಲೆ ಮಾಡಿದ ಪತಿ, ನ್ಯಾಯಕ್ಕಾಗಿ ಕುಟುಂಬಸ್ಥರ ಅಳಲು

ನ.22ರಂದು ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು. ಈ ಬಳಿಕ ಮಗುವಿನ ತಾಯಿ ನಾಗರತ್ನ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ (ನ.24) ರಂದು ಶವ ಹೊರತೆಗೆದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಗದಗ ಎಸಿ ವೆಂಕಟೇಶ‌ ನಾಯಕ್, ಸಿಪಿಐ ಎಸ್​ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬೀದಿನಾಯಿಗಳ ದಾಳಿಯಿಂದ ಐವರಿಗೆ ಗಂಭೀರ ಗಾಯ

ಕಲಬುರಗಿ: ಬೀದಿನಾಯಿಗಳ ದಾಳಿಯಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ತಾಪುರದ ತಳಗೇರಿ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ತಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​