AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆ: ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದ ದೊಡ್ಡಪ್ಪ

ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ಐದು ದಿನಗಳ ಬಳಿಕ ಇಂದು(,03) ಕಾಲುವೆಯಲ್ಲಿ ಪತ್ತೆಯಾಗಿದೆ. ಇನ್ನು ಈ ಸಾವಿನ ಬಗ್ಗೆ ಹಲವರು ಹಲವು ರೀತಿಯ;ಲ್ಲಿ ಅನುಮಾನದಿಂದ ನೋಡುವಂತಿದೆ.

ಕಾಣೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆ: ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದ ದೊಡ್ಡಪ್ಪ
Chandrashekar
TV9 Web
| Edited By: |

Updated on: Nov 03, 2022 | 8:19 PM

Share

ದಾವಣಗೆರೆ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಇಂದು(,03) ಶವ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರಿನ ಸಹಿತ ಚಂದ್ರಶೇಖರ್​ನ ಮೃತದೇಹ ಸಿಕ್ಕಿದೆ. ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದು ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ ಸ್ಫೋಟಕ ಆರೋಪ ಮಾಡಿದ್ದಾರೆ.

ಟಿವಿ9ಗೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ, ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು. ರೇಣುಕಾಚಾರ್ಯರ ಮೇಲಿನ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ. ಚಂದ್ರಶೇಖರ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಒತ್ತಾಯಿಸಿದರು.

ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್‌ ಶವ ಕಾರು ಸಹಿತ ಕಾಲುವೆಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ನಾಪತ್ತೆಯಾದ ಬಳಿಕ ಚಂದ್ರಶೇಖರ್ ಶವ ಪತ್ತೆಯಾಗಿದೆ. ಅದರಲ್ಲೂ ಚಂದ್ರಶೇಖರ್ ಶವ ಹಿಂದಿನ ಸೀಟ್​ಲ್ಲಿ ಪತ್ತೆಯಾಗಿದೆ. ಹೀಗಾಗಿ ಇದೊಂದು ಕೊಲೆ. ಮರಣೋತ್ತರ ಪರೀಕ್ಷಯಿಂದ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದರು.

ಅಕ್ಟೋಬರ್ 30ರಂದು ನಾಪತ್ತೆಯಾಗಿದ್ದ ಚಂದ್ರು

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ (ಅಕ್ಟೋಬರ್ 30) ರಾತ್ರಿ 11.30 ರಿಂದ ನಾಪತ್ತೆಯಾಗಿದ್ದರು. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗ ದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿತ್ತು.. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಕ್ಕಿರಲಿಲ್ಲ.. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ ನಲ್ಲಿ ಸ್ವಿಚ್ ಆಫ್ ಆಗಿತ್ತು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ