AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕ್ರೈಂ ಥ್ರಿಲ್ಲರ್ ಸಿನಿಮಾಗೂ ಕಡಿಮೆಯಿಲ್ಲ ಗೋಬಿಮಂಚೂರಿ ವಿಚಾರದಲ್ಲಿ ನಡೆದ ಕೊಲೆ ಸ್ಟೋರಿ

ಗೋಬಿ ಮಂಚೂರಿ ವಿಚಾರಕ್ಕೆ ತನ್ನ ಅಜ್ಜಿಯನ್ನು ಕೊಲೆ ಮಾಡಿದ ಮೊಮ್ಮಗ ಮತ್ತು ಆತನ ತಾಯಿ ಸೇರಿದಂತೆ ಒಟ್ಟು ಮೂವರನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಐದು ವರ್ಷಗಳ ನಂತರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಾವ ಕ್ರೈಂ ಥ್ರಿಲ್ಲರ್ ಸಿನಿಮಾಗೂ ಕಡಿಮೆಯಿಲ್ಲ ಗೋಬಿಮಂಚೂರಿ ವಿಚಾರದಲ್ಲಿ ನಡೆದ ಕೊಲೆ ಸ್ಟೋರಿ
ಸಾಂಧರ್ಬಿಕ ಚಿತ್ರ
TV9 Web
| Edited By: Rakesh Nayak Manchi|

Updated on: Oct 07, 2022 | 7:59 AM

Share

ಬೆಂಗಳೂರು: ನಗರದಲ್ಲಿ ನಡೆದ ಒಂದು ಅಪರಾಧ ಕೃತ್ಯವು ಯಾವುದೇ ಕ್ರೈಂ ಥ್ರಿಲ್ಲರ್ ಸಿನಿಮಾಗೂ ಕಡಿಮೆಯಿಲ್ಲ. ಮನೆ ಸದಸ್ಯೆಯನ್ನ ಕೊಂದು‌ ಮನೆಯಲ್ಲೇ ಹೂತಿಟ್ಟ ಕಥೆ ಇದು. ಇದೀಗ ಆರು ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಆರೋಪಿಗಳು ಮಹಾರಾಷ್ಟ್ರ ಕೊಲ್ಹಾಪುರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಮನೆಯ ಸದಸ್ಯೆಯನ್ನು ಕೊಲೆ ಮಾಡಿದ ಹಂತಕರು ಆರು ತಿಂಗಳು ಶವದೊಂದಿಗೆ ಮನೆಯಲ್ಲೇ ಇದ್ದರು. ನಂತರ ಆರೋಪಿಗಳು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದರು. 2016ರ ಆಗಸ್ಟ್ ತಿಂಗಳಲ್ಲಿ ಕೆಂಗೇರಿ ಸ್ಯಾಟಲೈಟ್​ನಲ್ಲಿ ನಡೆದಿದ್ದ ಹತ್ಯೆ ಇದಾಗಿದೆ.

ವೃದ್ದೆ ಶಾಂತಕುಮಾರಿ (69) ಮಗಳು ಶಶಿಕಲಾ, ಮೊಮ್ಮಗ ಸಂಜಯ್ ಜೊತೆ ವಾಸವಿದ್ದರು. ಶಾಂತಕುಮಾರಿ ಅತಿಯಾದ ಮಡಿವಂತಿಕೆ, ಶಿಸ್ತಿನಿಂದಿರುತ್ತಿದ್ದ ಇರುತ್ತಿದ್ದರು. ಒಂದು ದಿನ ಏರೋನಾಟಿಕ್ಸ್ ಇಂಜಿನಿಯರಿಂಗ್ ಪ್ರತಿಭಾವಂತನಾಗಿದ್ದ ಸಂಜಯ್ ಕಾಲೇಜಿನಿಂದ ಬರುವಾಗ ಅಜ್ಜಿಗೆ ಗೋಬಿ ಮಂಚೂರಿ ತಂದುಕೊಟ್ಟಿದ್ದ. ಆದರೆ ಶಿಸ್ತಿನಿಂದ ಇರುತ್ತಿದ್ದ ಶಾಂತಮ್ಮ ಗೋಬಿ ಮಂಚೂರಿ ಬೇಡ ಎಂದು ಮೊಮ್ಮಗನ ಮುಖಕ್ಕೆ ಎಸೆದಿದ್ದಾರೆ. ಇದು ಸಂಜಯ್​ನನ್ನು ಕೆರಳಿಸಿದೆ. ಪರಿಣಾಮವಾಗಿ ಲಟ್ಟಣಿಗೆಯಿಂದ ಬಲವಾಗಿ ಅಜ್ಜಿಗೆ ಹೊಡೆದಿದ್ದ. ಇದರಿಂದಾಗಿ ರಕ್ತಸ್ರಾವವಾಗಿ ಶಾಂತಮ್ಮ ಮೃತಪಟ್ಟಿದ್ದಾರೆ.

ಇತ್ತ ತಾಯಿಯನ್ನು ಮಗ ಕೊಲೆ ಮಾಡಿದ್ದಕ್ಕೆ ಆಕ್ರೋಶಗೊಂಡ ಸಂಜಯ್ ತಾಯಿ ಶಶಿಕಲಾ, ಮಗನ ಕೃತ್ಯವನ್ನ ಪೊಲೀಸರಿಗೆ ತಿಳಿಸಲು ಮುಂದಾಗಿದ್ದಾಳೆ. ಈ ವೇಳೆ ಸೆಂಟಿಮೆಂಟ್ ಡೈಲಾಗ್ ಹೊಡೆದ ಸಂಜಯ್, ‘ನಿನ್ನ ಮಗನನ್ನ ನೀನೇ ಜೈಲಿಗೆ ಕಳಿಸ್ತೀಯಾ?’ ಎಂದು ಗೋಗರೆದಿದ್ದಾನೆ. ತಾಯಿಯ ಮನಸ್ಸು ಕರಗಿತು. ಬಳಿಕ ಕೃತ್ಯ ಮುಚ್ಚಿಹಾಕುವ ತಂತ್ರವನ್ನು ತಾಯಿಮಗ ಸೇರಿಕೊಂಡು ಹೂಡಿದ್ದಾರೆ. ಇದಕ್ಕೆ ಸಾಥ್ ನೀಡಿದವನು ಸಂಜಯ್ ಸ್ನೇಹಿತ ನಂದೀಶ್. ಈ ಮೂವರು ಸೇರಿಕೊಂಡು ಶಾಂತಮ್ಮನ ಮೃತದೇಹವನ್ನು ಕೆಮಿಕಲ್ ಹಾಕಿ ಕಬೋರ್ಡ್​ನಲ್ಲಿ ಶವ ಇರಿಸಿ ಸಿಮೆಂಟ್ ಪ್ಲಾಸ್ಟರಿಂಗ್ ಮಾಡಿದ್ದರು. ಅಲ್ಪ ದಿನಗಳ ಬಳಿಕ ಶವದ ವಾಸನೆ ಬರಲಾರಂಭಿಸಿತ್ತು. ಹೀಗಾಗಿ ಆರೋಪಿಗಳು ಪುನಃ ಮೃತದೇಹಕ್ಕೆ ಬಣ್ಣ ಬಳಿದು ಪ್ಲಾಸ್ಟರಿಂಗ್ ಮಾಡಿದ್ದರು.

ಬಳಿಕ ಊರಿಗೆ ಹೋಗಿ ಬರುತ್ತೇವೆ ಅಂತಾ ಮನೆ ಮಾಲೀಕನಿಗೆ ಹೇಳಿದ್ದ ಅರೋಪಿಗಳು ಆರು ತಿಂಗಳುಗಳು ಕಳೆದರೂ ವಾಪಾಸ್ ಬಂದಿರಲಿಲ್ಲ. ಹೀಗಾಗಿ ಮನೆ ಮಾಲೀಕ ರಿಪೇರಿ ಕೆಲಸಕ್ಕಾಗಿ ಮನೆಯ ಬೀಗ ತೆರೆದಾಗ ರಕ್ತಸಿಕ್ತ ಸೀರೆ ಪತ್ತೆಯಾಗಿತ್ತು. ಹೀಗೆ ಪರಿಶೀಲನೆ ನಡೆಸಿದಾಗ ಕೊಲೆ ರಹಸ್ಯ ಬಯಲಿಗೆ ಬಂದಿದೆ. ಕಬೋರ್ಡ್ ಮುಚ್ಚಿರುವುದನ್ನ ಕಂಡು ತೆರೆದು ನೋಡಿದಾಗ ಶವದ ಕಳೇಬರ ಪತ್ತೆಯಾಗಿತ್ತು. ಹತ್ಯೆ ವಿಚಾರ ಮೇ 7ರಂದು ಪತ್ತೆಯಾಗಿದ್ದು, ಕೂಡಲೇ ಮನೆ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆ ಮಾಲೀಕನ ದೂರಿನ ಮೇರೆಗೆ ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತನಿಖೆಯ ಭಾಗವಾಗಿ ಸಂಜಯ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ನಂದೀಶ್​ನನ್ನ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದರು. ಈ ವೇಳೆ ಹತ್ಯೆಯ ಸಂಪೂರ್ಣ ವಿಚಾರ ಬಯಲಾಗಿದೆ.

ಐದು ವರ್ಷಗಳಿಂದಲೂ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಗಳು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನೆಲೆಸಿದ್ದರು. ಜೀವನಕ್ಕಾಗಿ ಸಂಜಯ್ ಹೊಟೇಲ್​ ಒಂದರಲ್ಲಿ ಸರ್ವರ್ ಆಗಿ ಕೆಲಸ ಮಾಡಿಕೊಂಡಿದ್ದನು. ಈ ಎಲ್ಲ ವಿಚಾರ ತಿಳಿದ ಕೆಂಗೇರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು