AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ನೋಯ್ಡಾ; ಸ್ನೇಹಿತೆಯ ತಬ್ಬಿಕೊಂಡೇ ಗುಂಡಿಕ್ಕಿದ ವಿದ್ಯಾರ್ಥಿ, ವಿವಿ ಡೈನಿಂಗ್ ಹಾಲ್​ನಲ್ಲಿ ಭೀಕರ ಕೊಲೆ

ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ಗುರುವಾರ ನಡೆದಿದೆ.

ಗ್ರೇಟರ್ ನೋಯ್ಡಾ; ಸ್ನೇಹಿತೆಯ ತಬ್ಬಿಕೊಂಡೇ ಗುಂಡಿಕ್ಕಿದ ವಿದ್ಯಾರ್ಥಿ, ವಿವಿ ಡೈನಿಂಗ್ ಹಾಲ್​ನಲ್ಲಿ ಭೀಕರ ಕೊಲೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 18, 2023 | 6:46 PM

Share

ನವದೆಹಲಿ: ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ಗುರುವಾರ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಏನೆಂಬ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಪ್ರಕಟವಾಗಿಲ್ಲ. ಪ್ರೇಮ ಪ್ರಕರಣದಿಂದ ಈ ಘಟನೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ವಿಶ್ವವಿದ್ಯಾಲಯದಲ್ಲಿ ನಡೆದಿದ್ದೇನು?

ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದರು. ಇಬ್ಬರೂ ವಿಶ್ವವಿದ್ಯಾಲಯದಲ್ಲಿ ಬಿಎ ಸಮಾಜಶಾಸ್ತ್ರದಲ್ಲಿ ಮೂರನೇ ವರ್ಷ ಓದುತ್ತಿದ್ದರು. ಇಬ್ಬರ ನಡುವೆ ಕೆಲ ಕಾಲ ವಾಗ್ವಾದ ನಡೆದಿತ್ತು. ಇದಾದ ನಂತರ ವಿಶ್ವವಿದ್ಯಾಲಯದ ಡೈನಿಂಗ್‌ ಹಾಲ್‌ನಲ್ಲಿ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದ ವಿದ್ಯಾರ್ಥಿ ಅಲ್ಲಿಂದ ಬಾಲಕರ ವಸತಿ ನಿಲಯಕ್ಕೆ ಓಡಿಹೋಗಿದ್ದಾನೆ. ಅಲ್ಲಿ ಆತ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ದಾದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊದಲು ತಬ್ಬಿಕೊಂಡ, ನಂತರ ಗುಂಡು ಹಾರಿಸಿದ!

ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆ ಮಾಡಿದ ವಿದ್ಯಾರ್ಥಿಯ ಹೆಸರು ಅನುಜ್. ಆತ ಹಾಗೂ ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಅದೇ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅನುಜ್ ಮತ್ತು ವಿದ್ಯಾರ್ಥಿನಿ ಒಳ್ಳೆಯ ಸ್ನೇಹಿತರಾಗಿದ್ದರು. ಆದರೆ ಕೆಲವು ಸಮಯ ಹಿಂದೆ ಇಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿತ್ತು. ಗುರುವಾರ ಇಬ್ಬರ ಸಾವಿನೊಂದಿಗೆ ಕೊನೆಗೊಂಡಿತು.

ಇದನ್ನೂ ಓದಿ: ಬೆಂಗಳೂರು: ನಡು ರಸ್ತೆಯಲ್ಲಿ ಹತ್ಯೆಗೈದು ಸಹೋದರಿಗೆ ಕರೆ ಮಾಡಿ ವಿಷಯ ತಿಳಿಸಿದ ಹಂತಕರು

ಗುರುವಾರ, ಅನುಜ್ ವಿಶ್ವವಿದ್ಯಾಲಯದ ಡೈನಿಂಗ್ ಹಾಲ್‌ನಲ್ಲಿ ಸ್ನೇಹಿತೆಯನ್ನು ಭೇಟಿಯಾದ. ಇಬ್ಬರೂ ಸ್ವಲ್ಪ ಸಮಯ ಮಾತನಾಡಿದರು ಮತ್ತು ನಂತರ ಅನುಜ್ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಪಿಸ್ತೂಲ್ ತೆಗೆದುಕೊಂಡು ಆಕೆಯ ಮೇಲೆ ಗುಂಡು ಹಾರಿಸಿದ. ಬಾಲಕಿಯನ್ನು ಕೊಂದ ನಂತರ ಅನುಜ್ ಬಾಲಕರ ಹಾಸ್ಟೆಲ್‌ನ ಕೊಠಡಿ ಸಂಖ್ಯೆ 328ಕ್ಕೆ ಓಡಿ ಅದೇ ಪಿಸ್ತೂಲ್‌ನಿಂದ ತನ್ನ ಮೇಲೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಇಬ್ಬರ ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಇಬ್ಬರ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು