AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ.

ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ
ಡಿ ಗ್ರೂಪ್ ನೌಕರ ವೇಣು
ರಾಮು, ಆನೇಕಲ್​
| Edited By: |

Updated on: Sep 30, 2023 | 5:23 PM

Share

ಆನೇಕಲ್, ಸೆಪ್ಟೆಂಬರ್​ 30: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ (harassment) ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ವೇಣು ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಲಾಗಿದೆ ಎನ್ನಲಾಗುತ್ತಿದ್ದು, ಅಸ್ವಸ್ಥ ನೌಕರ ವೇಣುಗೆ ಚಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ. ಶ್ವೇತಾಬಾಯಿ ಟಾರ್ಚರ್ ಕೊಟ್ಟಿದ್ದಾರೆ ಎಂದು ವೇಣು ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಕಿರುಕುಳದ ಬಗ್ಗೆ ಮೂರು ದಿನಗಳಿಂದ ಮನೆಯಲ್ಲಿ ಹೇಳುತ್ತಿದ್ದರು. ತುಂಬಾ ಕಿರುಕುಳ ನೀಡ್ತಿದ್ದಾರೆ ವಿಷ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಇಂದೂ ಕಚೇರಿಯಲ್ಲಿ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಪುಡ್ ಕಾರ್ಪೋರೇಷನ್​​ಗೆ ನಾಮನಿರ್ದೇಶನ ಹೆಸರಲ್ಲಿ ವ್ಯಕ್ತಿಗೆ 5.60 ಲಕ್ಷ ರೂ. ವಂಚನೆ

ಡಿ ಗ್ರೂಪ್‌ ನೌಕರ ವೇಣು ಕಳೆದ 15 ವರ್ಷದಿಂದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಚಂದಾಪುರದ ಬೆಸ್ಟ್ ಆಸ್ಪತ್ರೆ ಬಳಿ ಜನ ಜಮಾಯಿಸಿದ್ದಾರೆ.

ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಬಂದಿರುವಂತಹ ಘಟನೆ ಇತ್ತೇಚೆಗೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿತ್ತು. ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 354(A), 354(D), 504ರಡಿ ಎಫ್​ಐಆರ್​​ ದಾಖಲಿಸಲಾಗಿತ್ತು. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಶಿಕ್ಷಕಿ ಹೋದ ಕಡೆಯೆಲ್ಲಾ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿತ್ತು. ಸಹೋದ್ಯೋಗಿಯಿಂದ ನೊಂದು ಸಹ ಶಿಕ್ಷಕಿ ಪೊಲೀಸರ ಮೊರೆ ಹೋಗಿದ್ದು, ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ಆರ್‌.ರಂಗಧಾಮಯ್ಯ ವಿರುದ್ಧ ಎಫ್‌ಐಆರ್​ ದಾಖಲು ಮಾಡಲಾಗಿತ್ತು.

ಗಣೇಶೋತ್ಸವ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್​ ಮಾಡುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ರಾಯಚೂರಿನ ಜಲಾಲ್ ನಗರದಲ್ಲಿ ಸೆ.23ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೆಲುಗು ಹಾಡಿಗೆ ಹೆಜ್ಜೆ ಹಾಕುವ ವೇಳೆ ಹೃದಯಾಘಾತವಾಗಿದೆ. ಅನಂತಮ್ಮ(56) ಮೃತ  ಮಹಿಳೆ. ಮಾರ್ಕೆಟ್ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ