AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ.

ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ
ಡಿ ಗ್ರೂಪ್ ನೌಕರ ವೇಣು
ರಾಮು, ಆನೇಕಲ್​
| Edited By: |

Updated on: Sep 30, 2023 | 5:23 PM

Share

ಆನೇಕಲ್, ಸೆಪ್ಟೆಂಬರ್​ 30: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ (harassment) ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ವೇಣು ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಲಾಗಿದೆ ಎನ್ನಲಾಗುತ್ತಿದ್ದು, ಅಸ್ವಸ್ಥ ನೌಕರ ವೇಣುಗೆ ಚಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ. ಶ್ವೇತಾಬಾಯಿ ಟಾರ್ಚರ್ ಕೊಟ್ಟಿದ್ದಾರೆ ಎಂದು ವೇಣು ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಕಿರುಕುಳದ ಬಗ್ಗೆ ಮೂರು ದಿನಗಳಿಂದ ಮನೆಯಲ್ಲಿ ಹೇಳುತ್ತಿದ್ದರು. ತುಂಬಾ ಕಿರುಕುಳ ನೀಡ್ತಿದ್ದಾರೆ ವಿಷ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಇಂದೂ ಕಚೇರಿಯಲ್ಲಿ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಪುಡ್ ಕಾರ್ಪೋರೇಷನ್​​ಗೆ ನಾಮನಿರ್ದೇಶನ ಹೆಸರಲ್ಲಿ ವ್ಯಕ್ತಿಗೆ 5.60 ಲಕ್ಷ ರೂ. ವಂಚನೆ

ಡಿ ಗ್ರೂಪ್‌ ನೌಕರ ವೇಣು ಕಳೆದ 15 ವರ್ಷದಿಂದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಚಂದಾಪುರದ ಬೆಸ್ಟ್ ಆಸ್ಪತ್ರೆ ಬಳಿ ಜನ ಜಮಾಯಿಸಿದ್ದಾರೆ.

ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಬಂದಿರುವಂತಹ ಘಟನೆ ಇತ್ತೇಚೆಗೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿತ್ತು. ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 354(A), 354(D), 504ರಡಿ ಎಫ್​ಐಆರ್​​ ದಾಖಲಿಸಲಾಗಿತ್ತು. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಶಿಕ್ಷಕಿ ಹೋದ ಕಡೆಯೆಲ್ಲಾ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿತ್ತು. ಸಹೋದ್ಯೋಗಿಯಿಂದ ನೊಂದು ಸಹ ಶಿಕ್ಷಕಿ ಪೊಲೀಸರ ಮೊರೆ ಹೋಗಿದ್ದು, ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ಆರ್‌.ರಂಗಧಾಮಯ್ಯ ವಿರುದ್ಧ ಎಫ್‌ಐಆರ್​ ದಾಖಲು ಮಾಡಲಾಗಿತ್ತು.

ಗಣೇಶೋತ್ಸವ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್​ ಮಾಡುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ರಾಯಚೂರಿನ ಜಲಾಲ್ ನಗರದಲ್ಲಿ ಸೆ.23ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೆಲುಗು ಹಾಡಿಗೆ ಹೆಜ್ಜೆ ಹಾಕುವ ವೇಳೆ ಹೃದಯಾಘಾತವಾಗಿದೆ. ಅನಂತಮ್ಮ(56) ಮೃತ  ಮಹಿಳೆ. ಮಾರ್ಕೆಟ್ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ