AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ, ಗೃಹಲಕ್ಷ್ಮೀ ಹೆಸರಲ್ಲಿ ಮಹಾಮೋಸ; ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ

ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೆ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ ಎಸಗುವ ವಂಚಕರು ಅಖಾಡಕ್ಕೆ ಇಳಿದಿದ್ದಾರೆ. ಬಳ್ಳಾರಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಗೃಹಜ್ಯೋತಿ, ಗೃಹಲಕ್ಷ್ಮೀ ಹೆಸರಲ್ಲಿ ಮಹಾಮೋಸ; ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ
ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ನೆಪದಲ್ಲಿ ಬಳ್ಳಾರಿಯಲ್ಲಿ ಮಹಿಳೆಯರಿಂದ ಹಣ ವಸೂಲಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: Rakesh Nayak Manchi|

Updated on:Jun 29, 2023 | 10:02 AM

Share

ಬಳ್ಳಾರಿ: ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಗೃಹಜ್ಯೋತಿ (Gruha Jyothi Scheme) ಮತ್ತು ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಹೆಸರಿನಲ್ಲಿ ಜನರಿಗೆ ವಂಚನೆ ಎಸಗಲು ವಂಚಕರು ಅಖಾಡಕ್ಕಿಳಿದಿದ್ದಾರೆ. ಗ್ಯಾರಂಟಿ ಯೋಜನೆಗಳ ಲಾಭ ಕೊಡಿಸುವ ಹೆಸರಿನಲ್ಲಿ ಜನರ ಬಳಿ ಬಂದು ಅರ್ಜಿ ಸಲ್ಲಿಕೆ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್ ತಜ್ಞನೊಬ್ಬನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೆ ಒಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ನಬೀರ್ ಹುಸೇನ್ ಎಂಬಾತ ಬಳ್ಳಾರಿಯ ಅಹಂಭಾವಿಯಲ್ಲಿ ಮನೆ ಮನೆಗೆ ಹೋಗಿ ಆನಲೈನ್​ನಲ್ಲಿ ಅರ್ಜಿ ಅಪಲೋಡ್ ಮಾಡುವ ಭರವಸೆ ನೀಡಿ ಮಹಿಳೆಯರಿಂದ 150 ರೂಪಾಯಿಂದ 200 ರೂಪಾಯಿ ವರೆಗೆ ಹಣ ವಸೂಲಿ ಮಾಡುತ್ತಿದ್ದ. ಅಲ್ಲದೆ, ದಿಶಾ ಒನ್ ಹೆಸರಿನಲ್ಲಿ ಬಿಲ್ ನೀಡುತ್ತಿದ್ದನು. ಅನುಮಾನಗೊಂಡ ಸ್ಥಳೀಯರು ನಬೀರ್​ನನ್ನು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಳ್ಳಾರಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಎಚ್ಚರ ಎಚ್ಚರ…ಗೃಹಲಕ್ಷ್ಮಿ ಯೋಜನೆ ಹೆಸರಿಲ್ಲಿ ಬಂದಿವೆ ಮೂರು ನಕಲಿ ಆ್ಯಪ್​

ನಾನು ಜನರಿಗೆ ಮೋಸ ಮಾಡುತ್ತಿಲ್ಲ ಎನ್ನುತ್ತಿರುವ ನಬೀರ್

ನಾನು ಜನರಿಗೆ ಮೋಸ ಮಾಡುತ್ತಿಲ್ಲ. ಜನರ ಬಳಿಗೆ ಬಂದೂ ಅರ್ಜಿ ಅಪಲೋಡ್ ಮಾಡುತ್ತಿದ್ದೇನೆ ಎಂದು ನಬೀರ್ ಹೇಳುತ್ತಿದ್ದಾನೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಮನೆ ಮನೆಗೆ ತಲುಪಿಸಲು ಅರ್ಜಿಗಳನ್ನ ಅಪಲೋಡ್ ಮಾಡುತ್ತಿದ್ದೇನೆ. ಎಲ್ಲರಿಗೂ ಸೈಬರ್ ಸೆಂಟರ್​ಗೆ ಬಂದು ಅರ್ಜಿ ಸಲ್ಲಿಸಲು ಆಗಲ್ಲ. ಹಾಗಾಗಿ ನಾನೇ ಮನೆ ಮನೆಗೆ ತೆರಳಿ ಅರ್ಜಿ ಅಪಲೋಡ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 29 June 23

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್