AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿ ಉಪನ್ಯಾಸಕನ ಭೀಕರ ಹತ್ಯೆ; ಚೌಡಿ ಪೂಜೆ ಮಾಡಿ ಆಚೆ ಹೋದವ ಸೇರಿದ ಮಸಣ

ಶಾಲೆಯೊಂದರಲ್ಲಿ ಅತಿಥಿ ಉಪನ್ಯಾಸಕನಾಗಿದ್ದ ಆತ , ದಿನನಿತ್ಯ ಮಕ್ಕಳಿಗೆ ಪಾಠ ಮಾಡುವುದರ ಜೊತೆಗೆ ಯಂತ್ರ ಮಂತ್ರ ತಂತ್ರ ಹಾಗೂ ಪೂಜೆ ಮಾಡುವುದನ್ನು ಮಾಡುತ್ತಿದ್ದ. ಅದರಂತೆ ನಿನ್ನೆ(ಫೆ.10) ಸಂತೆ ಮನೆಯಲ್ಲಿ ಚೌಡಿಗೆ ಪೂಜೆ ಮಾಡಿ ಆಚೆ ಹೋದವ ಬೆಳಗಾಗುವಷ್ಟರಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕುಳಿನಂಜಯ್ಯನಪಾಳ್ಯದ ಗ್ರಾಮದ ಬಳಿ ಕೊಲೆಯಾಗಿ ಹೋಗಿದ್ದಾನೆ. 

ಅತಿಥಿ ಉಪನ್ಯಾಸಕನ ಭೀಕರ ಹತ್ಯೆ; ಚೌಡಿ ಪೂಜೆ ಮಾಡಿ ಆಚೆ ಹೋದವ ಸೇರಿದ ಮಸಣ
ಕುಣಿಗಲ್​ ಅತಿಥಿ ಉಪನ್ಯಾಸಕನ ಭೀಕರ ಹತ್ಯೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Feb 10, 2024 | 4:53 PM

Share

ತುಮಕೂರು, ಫೆ.10: ಜಿಲ್ಲೆಯ ಕುಣಿಗಲ್ ತಾಲೂಕಿನ ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ(Guest lecturer) ಕೆಲಸ ಮಾಡುತ್ತಿದ್ದ ಮರಿಯಪ್ಪ (47) ಎಂಬಾತ ಭೀಕರವಾಗಿ ಕೊಲೆಯಾಗಿ ಹೋಗಿದ್ದಾನೆ. ತಲೆಭಾಗಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮರಿಯಪ್ಪ ಮೂಲತಃ ಪಂಡಿತನಾಗಿ ಕೆಲಸ ಮಾಡುತ್ತಿದ್ದು, ಕಳೆದ ಆರು ತಿಂಗಳಿನಿಂದ ಮೋದೂರು ಗ್ರಾಮದ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನಂತೆ‌. ಇದರ ಜೊತೆಗೆ ಮನೆಯಲ್ಲಿ ಚೌಡಿ ದೇವಿಗೆ ಪೂಜೆ ಮಾಡಿ ಯಂತ್ರ ಮಂತ್ರ ಎಂದು ಶಾಸ್ತ್ರ ಹೇಳುತ್ತಿದ್ದ ಎನ್ನಲಾಗಿದೆ.

ಕುಳಿನಂಜಯ್ಯಪಾಳ್ಯ ಗ್ರಾಮದ ಸುತ್ತ ಮುತ್ತಲಿನ ಗ್ರಾಮಗಳಿಂದ ಬಂದು ಶಾಸ್ತ್ರ ಕೇಳಿ ಹೋಗುತ್ತಿದ್ದರಂತೆ. ಜೊತೆಗೆ ಕವಡೆ ಹಾಕುವುದು, ತಡೆ ಹೊಡೆಯುವುದು ಕೆಲಸ ಮಾಡುತ್ತಿದ್ದ. ನಿನ್ನೆ ಅಮವಾಸ್ಯೆ ಆದ ಕಾರಣ ಶಾಲೆ ಮುಗಿಸಿ ಸಂಜೆ ಮನೆಯಿಂದ ಹೊರಗೆ ಹೋದವನು ವಾಪಸ್ ಬಂದೆ ಇಲ್ಲ. ಬೆಳಗಾದ ಮೇಲೆ ಸ್ಥಳೀಯರು ಗಮನಿಸಿ ಕುಣಿಗಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮೃತನಿಗೆ ನಾಲ್ವರು ಮಕ್ಕಳು, ಪತ್ನಿ ಇದ್ದು, ಇದೀಗ ಅನಾಥರಾಗಿದ್ದಾರೆ. ಮರಿಯಪ್ಪರನ್ನೇ ನಂಬಿ ಬದುಕುತ್ತಿದ್ದ ಕುಟುಂಬ ಕಂಗಲಾಗಿದೆ.

ಇದನ್ನೂ ಓದಿ:ಧಾರವಾಡದಲ್ಲಿ ಚಿಕ್ಕಮ್ಮನನ್ನೇ ಕೊಂದ ಕೊಲೆಗಾರ ಅಂದರ್​; ಹತ್ಯೆಗೆ ಕಾರಣ ಬಾಯ್ಬಿಟ್ಟ ಹಂತಕ

ಇನ್ನು ವಿಚಾರ ತಿಳಿದ ಎಸ್​ಪಿ ಅಶೋಕ್ ವೆಂಕಟ್, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮರಿಯಪ್ಪ ಕೊಲೆಯಾಗಿದ್ದು, ನಿನ್ನೆ ರಾತ್ರಿ ಯಾರೋ ಮೂವರು ಜೊತೆಯಲ್ಲಿದ್ದ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಶ್ವಾನ ದಳ, ಎಫ್​ಎಸ್​ಎಲ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳಿಯರೇ ಕೊಲೆ ಮಾಡಿರುವ ಸುಳಿವು ಸಿಕ್ಕಿದೆ. ಶೀಘ್ರವಾಗಿ ಆರೋಪಿಗಳು ಪತ್ತೆ ಹಚ್ಚುವುದಾಗಿ ಎಸ್​ಪಿ ಅಶೋಕ್ ವೆಂಕಟ್ ಹೇಳಿದ್ದಾರೆ. ಇನ್ನು ಇದು ಮೇಲ್ನೋಟಕ್ಕೆ ಮಾಟ ಮಂತ್ರದ ಕಾರಣದಿಂದ ಕೊಲೆ ಮಾಡಿರುವ ಬಗ್ಗೆ ಸುಳಿವು ಗೊತ್ತಾಗಿದೆ. ಶವದ ಜೊತೆ ಬ್ಯಾಗ್​​ವೊಂದು ಪತ್ತೆಯಾಗಿದ್ದು, ಅದರಲ್ಲಿ ಕೋಳಿ ಮೊಟ್ಟೆ, ಅರಿಶಿನ ಕುಂಕುಮ, ನಿಂಬೆಹಣ್ಣು ಸೇರಿದಂತೆ ಮಾಟ-ಮಂತ್ರದ ಸಾಮಾಗ್ರಿಗಳು ಇದ್ದವು ಎನ್ನಲಾಗಿದೆ. ಪೊಲೀಸರ ತನಿಖೆ ಬಳಿಕ ಸತ್ಯ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ