AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಸ್ನೇಹಿತನ 3 ವರ್ಷದ ಮಗು ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ವ್ಯಕ್ತಿಯೊಬ್ಬ ಮೂರು ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಗುಜರಾತ್​ನಲ್ಲಿ ನಡೆದಿದೆ.ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು, ತಕ್ಷಣ ಕ್ರಮ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಗುಜರಾತ್: ಸ್ನೇಹಿತನ 3 ವರ್ಷದ ಮಗು ಮೇಲೆ ವ್ಯಕ್ತಿಯಿಂದ ಅತ್ಯಾಚಾರ
ಮಗು
ನಯನಾ ರಾಜೀವ್
|

Updated on:Aug 28, 2024 | 12:17 PM

Share

ವ್ಯಕ್ತಿಯೊಬ್ಬ ತನ್ನ ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನ ವಲ್ಸಾದ್​ನಲ್ಲಿ ನಡೆದಿದೆ. ಮೂರು ವರ್ಷದ ಮಗು ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತನೇ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಅಪರಾಧ ಎಸಗಿ ನಂತರ ಪರಾರಿಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು, ತಕ್ಷಣ ಕ್ರಮ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಆರೋಪಿ ಸಿಕ್ಕಿಬಿದ್ದಿದ್ದು, ಮಧ್ಯಾಹ್ನದೊಳಗೆ ಊರಿಗೆ ಕರೆತರಲಾಗುವುದು ಎಂದು ಪೊಲೀಸರು ಪ್ರತಿಭಟನಾಕಾರರ ಬಳಿ ತಿಳಿಸಿದ್ದಾರೆ.

ಆದರೂ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದರು.

ಮತ್ತಷ್ಟು ಓದಿ: Shocking Video: ಗುಪ್ತಾಂಗಕ್ಕೆ ಮೆಣಸಿನ ಪುಡಿ ತುಂಬಿ ಚಿತ್ರಹಿಂಸೆ; ಶಾಕಿಂಗ್ ವಿಡಿಯೋ ವೈರಲ್

2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ.

ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ.

ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Wed, 28 August 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ