AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಗರ್ಲ್ ಫ್ರೆಂಡ್ ಮೇಲೆ ಅತ್ಯಾಚಾರ; ಖಾಸಗಿ ಭಾಗಕ್ಕೆ ಮೆಣಸಿನ ಪುಡಿ ಹಾಕಿ ವಿಕೃತಿ ಮೆರೆದ ವಿವಾಹಿತನ ವಿರುದ್ಧ ಪ್ರಕರಣ ದಾಖಲು

ವ್ಯಕ್ತಿಯೊಬ್ಬ ತಾನು ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

Gujarat: ಗರ್ಲ್ ಫ್ರೆಂಡ್ ಮೇಲೆ ಅತ್ಯಾಚಾರ; ಖಾಸಗಿ ಭಾಗಕ್ಕೆ ಮೆಣಸಿನ ಪುಡಿ ಹಾಕಿ ವಿಕೃತಿ ಮೆರೆದ ವಿವಾಹಿತನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರImage Credit source: The Hindu photo library
ನಯನಾ ಎಸ್​ಪಿ
|

Updated on:May 19, 2023 | 10:27 AM

Share

ಸೂರತ್‌ನಲ್ಲಿ (Surat) ನಡೆದ ಅಮಾನವೀಯ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತಾನು ಸಂಬಂಧ ಹೊಂದಿದ್ದ ಮಹಿಳೆಯ (Girlfriend) ಮೇಲೆ ಅತ್ಯಾಚಾರ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಕರಣ (Case) ದಾಖಲಿಸಲಾಗಿದೆ. ಆರೋಪಿಯು ಆಕೆಯ ಖಾಸಗಿ ಭಾಗಗಳಲ್ಲಿ ಮೆಣಸಿನಪುಡಿಯನ್ನು ತುಂಬಿದ್ದರಿಂದ ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಆರೋಪಿ ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್ ತನಗೆ ವಿವಾಹವಾಗಿದೆ ಮತ್ತು ತನ್ನ ಪತ್ನಿ ಬೇರೆ ಗ್ರಾಮದಲ್ಲಿ ವಾಸಿಸುತ್ತಿರುವುದನ್ನು ಮುಚ್ಚಿಟ್ಟಿದ್ದಾನೆ. ಈ ನೆಪದಲ್ಲಿ, ಅವನು ಸಂತ್ರಸ್ತೆಯೊಂದಿಗೆ ಸಂಬಂಧವನ್ನು ಬೆಳೆಸಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿಗೆ ಮದುವೆ ಆಗಿರುವ ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆ ಪಟೇಲ್‌ನೊಂದಿಗೆ ಜಗಳವಾಡಿ ಅವನಿಂದ ದೂರವಾಗಲು ನಿರ್ಧರಿಸಿದಳು. ಆಕೆಯ ನಿರ್ಧಾರದಿಂದ ಕೋಪಗೊಂಡ ಪಟೇಲ್ ತನ್ನ ಗರ್ಲ್ ಫ್ರೆಂಡ್ ಅನ್ನು ಕೇಬಲ್ ವೈರ್‌ನಿಂದ ಹೊಡೆದು ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಖಾಸಗಿ ಭಾಗಕ್ಕೆ ಮೆಣಸಿನಪುಡಿಯನ್ನು ತುಂಬಿಸಿದ್ದಾನೆ. ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೀವ್ರವಾದ ಗಾಯಗಳಿಂದಾಗಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ಸೇರಿಸಲಾಯಿತು.

ಈ ಹಿನ್ನೆಲೆಯಲ್ಲಿ ಓಲಪಾಡ್ ಪೊಲೀಸ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಆರೋಪಿಯನ್ನು ಮಂಗಳವಾರ (ಮೇ 16) ಪೊಲೀಸರು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಐಪಿಸಿ 376ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ರೀತಿಯ ಅಮಾನವೀಯ ಪ್ರಕರಣಗಳು ಮೊದಲೇನಲ್ಲ!

ದೇಶದ ಜನರನ್ನು ಬೆಚ್ಚಿಬೀಳಿಸಿದ ನಿರ್ಭಯಾ ಪ್ರಕರಣದ ನಂತರವೂ ಇಂತಹ ಘಟನೆಗಳು ನಿರಂತರವಾಗಿ ವರದಿಯಾಗುತ್ತಿವೆ.

2021 ರಲ್ಲಿ, ಮುಂಬೈನ ಸಾಕಿ ನಾಕಾದಲ್ಲಿ ಪೊಲೀಸರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ದೇಹದ ಮೇಲೆ ಗಂಭೀರವಾದ ಗಾಯಗಳನ್ನು ಉಂಟುಮಾಡಿದ ವ್ಯಕ್ತಿಯನ್ನು ಬಂಧಿಸಿದರು. ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ತಂದೆ ಹಾಗೂ ಮತ್ತೋರ್ವನಿಗೆ 84 ವರ್ಷಗಳ ಜೈಲು ಶಿಕ್ಷೆ

2019 ರಲ್ಲಿ, ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಖಾಸಗಿ ಭಾಗಗಳಲ್ಲಿ ಮೋಟಾರ್‌ಬೈಕ್ ಹ್ಯಾಂಡಲ್‌ನ ಪ್ಲಾಸ್ಟಿಕ್ ಹಿಡಿತವನ್ನು ಅಳವಡಿಸಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದರು. ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯ ವೈದ್ಯರು ನಾಲ್ಕು ಗಂಟೆಗಳ ಕಾಲ ನಡೆದ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ ಪ್ಲಾಸ್ಟಿಕ್ ಹಿಡಿತವನ್ನು ತೆಗೆದರು.

Published On - 10:26 am, Fri, 19 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?