ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಈ ದಾಳಿಯಲ್ಲಿ ಪತ್ನಿ ಹಾಗೂ ಮಗು ಪ್ರಾಣ ಕಳೆದುಕೊಂಡಿದ್ದಾರೆ. ಪೋಷಕರು ಗಾಯಗೊಂಡಿದ್ದಾರೆ. ಕೊನೆಗೆ ವ್ಯಕ್ತಿ ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಈ ಘಟನೆಯು ಸೂರತ್‌ನಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ದುರಂತ ಪ್ರಕರಣದ ಸಂಪೂರ್ಣ ಚಿತ್ರವನ್ನು ಅರ್ಥಮಾಡಿಕೊಳ್ಳಲು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ

ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಸ್ಮಿತ್
Image Credit source: Free Press Journal

Updated on: Dec 27, 2024 | 3:25 PM

ವ್ಯಕ್ತಿಯೊಬ್ಬ ಹೆಂಡತಿ, ಮಗುವನ್ನು ಕೊಂದು ಪೋಷಕರ ಮೇಲೆ ಹಲ್ಲೆ ನಡೆಸಿ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಸೂರತ್‌ನ ಸರ್ತಾನಾ ಪ್ರದೇಶದಲ್ಲಿ ನಡೆದ ಭೀಕರ ಸಾಮೂಹಿಕ ಹತ್ಯೆ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ.

ಸ್ಮಿತ್ ಜಿಯಾನಿ ಎಂಬ ವ್ಯಕ್ತಿ ತನ್ನ ಕುಟುಂಬಕ್ಕೆ ಚಾಕುವಿನಿಂದ ಹಲ್ಲೆ ನಡೆಸಿ, ಪತ್ನಿ ಮತ್ತು ಮಗುವನ್ನು ಕೊಂದು, ಪೋಷಕರನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ನಂತರ ಸ್ಮಿತ್ ತನ್ನ ಕುತ್ತಿಗೆಯನ್ನು ಸೀಳಿಕೊಂಡು ತನ್ನ ಜೀವನವನ್ನು ಅಂತ್ಯಗೊಳಿಸಲು ಪ್ರಯತ್ನಿಸಿದ್ದಾನೆ.

ಸ್ಮಿತ್ ಮತ್ತು ಅವರ ಪೋಷಕರು ತಮ್ಮ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪತ್ನಿ ಮತ್ತು ಮಗು ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಸಾರ್ಥನಾ ಪೊಲೀಸರು ತನಿಖೆ ಆರಂಭಿಸಿದ್ದು, ಈ ದುರಂತ ಕೃತ್ಯಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಅಮ್ರೇಲಿಯ ಸಾವರಕುಂಡ್ಲಾದಿಂದ ಬಂದಿರುವ ಕುಟುಂಬದಲ್ಲಿ ಆಂತರಿಕ ಕಲಹವಿತ್ತು ಎನ್ನಲಾಗಿದೆ.ಕೌಟುಂಬಿಕ ಒತ್ತಡಗಳು ಸ್ಮಿತ್ ಅವರನ್ನು ಈ ಕೃತ್ಯಕ್ಕೆ ಪ್ರೇರೇಪಿಸಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಮತ್ತಷ್ಟು ಓದಿ: ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆ

ಈ ಘಟನೆಯು ಸೂರತ್‌ನಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ದುರಂತ ಪ್ರಕರಣದ ಸಂಪೂರ್ಣ ಚಿತ್ರವನ್ನು ಅರ್ಥಮಾಡಿಕೊಳ್ಳಲು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಪೋಷಕರು ಗುಣಮುಖವಾದ ಬಳಿಕ ನಿಜವಾದ ಕಾರಣ ಹೊರಬೀಳಬಹುದು.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us