
ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಐಡಿ
ವಿಶೇಷ ತಂಡವು 11 ಜನ ಆರೋಪಿಗಳನ್ನು ವಶಕ್ಕೆ ಪಡೆದಿದೆ.
ವಶಕ್ಕೆ ಪಡೆದ 11 ಆರೋಪಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗುವುದು. ಕೊವಿಡ್ ಟೆಸ್ಟ್ ವರದಿ ಬಂದ ಬಳಿಕ ಆರೋಪಿಗಳನ್ನ ಕೋರ್ಟ್ಗೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. 11 ಜನ ಆರೋಪಿಗಳು ಸಾಲ ಹಿಂತಿರುಗಿಸದೆ ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಗುರುರಾಘವೇಂದ್ರ ಸಹಕಾರಿ ಬ್ಯಾಂಕ್: 15 ಕಡೆ ಸಿಐಡಿ ದಾಳಿ