AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ: ಪತ್ನಿಯನ್ನು ಕೊಂದು, ಶವಕ್ಕೆ ಮಗನ ಕಟ್ಟಿಹಾಕಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪತ್ನಿಯನ್ನು ಕೊಂದು ಆಕೆಯ ಶವಕ್ಕೆ ಮಗನನ್ನು ಕಟ್ಟಿಹಾಕಿ, ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ನಂತರ ಗಾಜಿಯಾಬಾದ್‌ನ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಗುರುಗ್ರಾಮ: ಪತ್ನಿಯನ್ನು ಕೊಂದು, ಶವಕ್ಕೆ ಮಗನ ಕಟ್ಟಿಹಾಕಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಗುರುಗ್ರಾಮImage Credit source: Siasat.com
ನಯನಾ ರಾಜೀವ್
|

Updated on: Jan 02, 2024 | 8:53 AM

Share

ಪತ್ನಿಯನ್ನು ಕೊಂದು ಆಕೆಯ ಶವಕ್ಕೆ ಮಗನನ್ನು ಕಟ್ಟಿಹಾಕಿ, ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ನಂತರ ಗಾಜಿಯಾಬಾದ್‌ನ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

30 ವರ್ಷದ ಗೌರವ್ ಶರ್ಮಾ ಎಂಬುವವರು ಚೂಪಾದ ಆಯುಧದಿಂದ ಪತ್ನಿಯ ಕತ್ತು ಸೀಳಿ, ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ತನ್ನ ಮಗನಿಗೂ ಕೂಡ ಇಟ್ಟಿಗೆಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡಿಎಲ್‌ಎಫ್ 3 ನೇ ಹಂತದಲ್ಲಿರುವ ಮನೆಯೊಳಗಿಂದ ಬಾಲಕ ಕೂಗುವುದನ್ನು ಅರಿತ ಅಕ್ಕಪಕ್ಕದ ಮನೆಯವರು ತಕ್ಷಣವೇ ಮನೆಗೆ ಧಾವಿಸಿದ್ದರು. ಆದರೆ ಆತನ ಮನೆಗೆ ಬೀಗ ಹಾಕಿತ್ತು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದರು. ಘಟನಾ ಸ್ಥಳಕ್ಕೆ ತಲುಪಿದ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಮಹಿಳೆಯ ಶವ ಮತ್ತು ಗಾಯಗೊಂಡ ಮಗು ಅದರ ಬಳಿ ಅಳುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ

ಮೃತ ಮಹಿಳೆಯ ಮೊಬೈಲ್ ಫೋನ್ ಶೌಚಾಲಯದ ಸೀಟಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮಗುವನ್ನು ತಕ್ಷಣವೇ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಆತನನ್ನು ಮಹಿಳೆಯ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು, ಅವರು ಆಗ್ರಾದ ಅವರ ಸ್ಥಳೀಯ ಸ್ಥಳಕ್ಕೆ ಕರೆದೊಯ್ದರು.

ಮೂಲತಃ ಆಗ್ರಾದವರಾದ ಲಕ್ಷ್ಮಿ ಅವರು ತಮ್ಮ ಪತಿ ಗೌರವ್ ಅವರೊಂದಿಗೆ ಗುರುಗ್ರಾಮ್‌ನಲ್ಲಿ ನೆಲೆಸಿದ್ದರು. ಸುಮಾರು ಆರು ತಿಂಗಳ ಹಿಂದೆ ದಂಪತಿಗಳು ಗುರುಗ್ರಾಮ್‌ಗೆ ಸ್ಥಳಾಂತರಗೊಂಡಿದ್ದರು. ಗೌರವ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಆದರೆ ಈ ದಿನಗಳಲ್ಲಿ ನಿರುದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿ ನಡುವಿನ ವಾಗ್ವಾದ ಹಿಂಸಾಚಾರಕ್ಕೆ ತಿರುಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರವ್ ರಾತ್ರಿ 11.45ರ ಸುಮಾರಿಗೆ ಗಾಜಿಯಾಬಾದ್​ನ ಕೌಶಂಬಿ ಪೆಟ್ರೋ ನಿಲ್ದಾಣದಿಂದ ಜಿಗಿದು ಸಾವನ್ನಪ್ಪಿದ್ದಾರೆ. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಟ್ರಾನ್ಸ್ ಹಿಂಡನ್ ವಲಯದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶುಭಂ ಪಟೇಲ್ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!