AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಪರೀಕ್ಷೆಯಲ್ಲಿ ಹ್ಯಾಕರ್ ಶ್ರೀಕಿ, ವಿಷ್ಣು ಭಟ್ ಮಾದಕ ವಸ್ತು ಸೇವಿಸಿರುವುದು ದೃಢ

ವಿಷ್ಣು ಭಟ್ ಮನೆಯಲ್ಲಿ ಗಾಂಜಾ ಬೆರೆಸಿದ ಸಿಗರೇಟ್​ ಪತ್ತೆ ಆಗಿದೆ. ಮನೆಯಲ್ಲಿ ಗಾಂಜಾ ಬೆರೆಸಿದ ಸಿಗರೇಟ್​ ಸೇವಿಸಿರುವುದು ಪತ್ತೆಯಾಗಿದೆ. ವಿಷ್ಣು ಭಟ್ ಮನೆಯಲ್ಲಿ ಪೌಡರ್​ ಮಾದರಿಯ ಡ್ರಗ್ಸ್​ ಪತ್ತೆಯಾಗಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಹ್ಯಾಕರ್ ಶ್ರೀಕಿ, ವಿಷ್ಣು ಭಟ್ ಮಾದಕ ವಸ್ತು ಸೇವಿಸಿರುವುದು ದೃಢ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Updated By: ganapathi bhat|

Updated on:Nov 07, 2021 | 9:34 PM

Share

ಬೆಂಗಳೂರು: ಇಲ್ಲಿನ ಹೋಟೆಲ್ ಒಂದರಲ್ಲಿ ವಿಷ್ಣು ಭಟ್ ಹಾಗೂ ಡ್ರಗ್ ಮತ್ತು ಬಿಟ್​ಕಾಯಿನ್ ಪ್ರಕರಣದ ಆರೋಪಿಯಾಗಿದ್ದ ಶ್ರೀಕೃಷ್ಣ ಎಂಬಾತನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರೂ ಮಾದಕ ವಸ್ತು ಸೇವಿಸಿರುವುದು ದೃಢವಾಗಿದೆ. ಮಾದಕ ವಸ್ತು ಸೇವನೆ ದೃಢ ಹಿನ್ನೆಲೆಯಲ್ಲಿ ವಿಷ್ಣು ಭಟ್ ಮನೆ ಪರಿಶೀಲನೆ ನಡೆಸಲಾಗಿದೆ. ಇಂದಿರಾನಗರದ ವಿಷ್ಣು ಭಟ್​ ಮನೆಯಲ್ಲಿ ಪೊಲೀಸರ ಶೋಧಕಾರ್ಯ ನಡೆದಿದೆ. ಭೀಮಾ ಜ್ಯುವೆಲರ್ಸ್​ ಮಾಲೀಕನ ಪುತ್ರನಾಗಿರುವ ವಿಷ್ಣು ಭಟ್ ಮನೆಯಲ್ಲಿ ಪರಿಶೀಲನೆ ಮಾಡಲಾಗಿದೆ.

ಈ ವೇಳೆ, ವಿಷ್ಣು ಭಟ್ ಮನೆಯಲ್ಲಿ ಗಾಂಜಾ ಬೆರೆಸಿದ ಸಿಗರೇಟ್​ ಪತ್ತೆ ಆಗಿದೆ. ಮನೆಯಲ್ಲಿ ಗಾಂಜಾ ಬೆರೆಸಿದ ಸಿಗರೇಟ್​ ಸೇವಿಸಿರುವುದು ಪತ್ತೆಯಾಗಿದೆ. ವಿಷ್ಣು ಭಟ್ ಮನೆಯಲ್ಲಿ ಪೌಡರ್​ ಮಾದರಿಯ ಡ್ರಗ್ಸ್​ ಪತ್ತೆಯಾಗಿದೆ. ಹ್ಯಾಕರ್ ಶ್ರೀಕೃಷ್ಣ, ವಿಷ್ಣು ಭಟ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಎನ್​ಡಿಪಿಎಸ್​ ಕಾಯ್ದೆಯಡಿ ಪೊಲೀಸರು ಕೇಸ್​ ದಾಖಲಿಸಿದ್ದಾರೆ. ಶ್ರೀಕೃಷ್ಣ, ವಿಷ್ಣು ಭಟ್ ವಿಚಾರಣೆ ಮುಂದುವರಿಸಿದ್ದಾರೆ.

ಹೋಟೆಲ್​ನಲ್ಲಿ ವಿಷ್ಣು ಭಟ್, ಶ್ರೀಕೃಷ್ಣನ ಪುಂಡಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಷ್ಣು ಭಟ್, ಶ್ರೀಕೃಷ್ಣ ಮಾದಕ ವಸ್ತು ಸೇವಿಸಿರುವುದು ದೃಢವಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಹೇಳಿಕೆ ನೀಡಿದ್ದಾರೆ. ವೈದ್ಯಕೀಯ ತಪಾಸಣೆ ವೇಳೆ ಮಾದಕ ವಸ್ತು ಸೇವನೆ ದೃಢವಾಗಿದೆ. ಇದರ ಬೆನ್ನಲ್ಲೇ ವಿಷ್ಣು ಭಟ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದೆವು. ವಿಷ್ಣು ಭಟ್​ ಮನೆಯಲ್ಲಿ ಗಾಂಜಾ, ಮಾದಕ ವಸ್ತು ಸಿಕ್ಕಿದೆ. ಪತ್ತೆಯಾದ ವಸ್ತುವನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಆರೋಪಿಗಳಿಂದ ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಾಗಿದೆ. ಹೀಗಾಗಿ ಆರೋಪಿಗಳನ್ನು ಕೋರ್ಟ್​ಗೆ ಹಾಜರು ಪಡಿಸುತ್ತೇವೆ. ಮೊದಲ ಆರೋಪಿ ವಿಷ್ಣು ಭಟ್​ ವಶಕ್ಕೆ ನೀಡುವಂತೆ ಮನವಿ ಮಾಡುತ್ತೇವೆ. ಆರೋಪಿಗಳಿಗೆ ಗಾಂಜಾ, ಮಾದಕ ವಸ್ತು ಎಲ್ಲಿಂದ ಬಂದವು? ಯಾರು ಇವರಿಗೆ ಮಾದಕ ವಸ್ತು ಪೂರೈಸಿದ್ದರೆಂದು ವಿಚಾರಣೆ ನಡೆಸುತ್ತೇವೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀಕಿ, ವಿಷ್ಣು ಭಟ್ ಪುಂಡಾಟ ಪ್ರಕರಣ; ಭೀಮಾ‌ ಜ್ಯುವೆಲರ್ಸ್‌ ಮಾಲೀಕನ ಮಗ ವಿಷ್ಣು ಬಂಧನ

ಇದನ್ನೂ ಓದಿ: Bitcoin Case: ಬಿಟ್​ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಬೆಂಗಳೂರಿನ 5 ಸ್ಟಾರ್ ಹೊಟೇಲಿನಲ್ಲಿ ಬಂಧನ

Published On - 9:33 pm, Sun, 7 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?