AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು

ವಿಶ್ವದ ದೈತ್ಯ ಆನ್​ಲೈನ್​ ಕಂಪನಿಗೆ ಹ್ಯಾಕರ್​​ಗಳು ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು
ಸಾಂದರ್ಭಿಕ ಚಿತ್ರ
Jagadisha B
| Updated By: ವಿವೇಕ ಬಿರಾದಾರ|

Updated on:Aug 18, 2023 | 12:32 PM

Share

ಬೆಂಗಳೂರು: ವಿಶ್ವದ ದೈತ್ಯ ಆನ್​ಲೈನ್ (Online)​ ಕಂಪನಿಗೆ ಹ್ಯಾಕರ್​​ಗಳು (Hackers) ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​ (Amazon)​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹ್ಯಾಕರ್​​​ಗಳು ವಿದೇಶದಲ್ಲಿದ್ದುಕೊಂಡು ಬೆಂಗಳೂರು, ಹೈದ್ರಾಬಾದ್, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳನ್ನು ತಮ್ಮ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಹ್ಯಾಕರ್​ಗಳು ಈ ವಿದ್ಯಾರ್ಥಿಗಳನ್ನು ಟೆಲಿಗ್ರಾಂ ಮೂಲಕವೇ ಸಂಪರ್ಕಿಸಿ ನಂತರ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಗಳನ್ನು ಟಾರ್ಗೆಟ್ ಮಾಡುವಂತೆ ಟಾಸ್ಕ್ ನೀಡುತ್ತಾರೆ. ಕೆಲಸವಾದ ಬಳಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಕೌಂಟ್ ಮೂಲಕವೇ ಹಣ ವರ್ಗಾಯಿಸಿಕೊಳ್ಳುತ್ತಾರೆ. ಹ್ಯಾಕರ್​ಗಳು ಇದೀಗ ಅಮೆಜಾನ್​​​ ನಂತಹ ದೊಡ್ಡ ಕಂಪನಿಯನ್ನ ಟಾರ್ಗೆಟ್​ ಮಾಡಿ ಕಂಪನಿಗೆ ಲಕ್ಷ ಲಕ್ಷ ರೂ. ವಂಚಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ಈ ಸಂಬಂಧ ದೇಶದ 25ಕ್ಕೂ ಹೆಚ್ಚು ಪೊಲೀಸ್​​ ಠಾಣೆಗಳಲ್ಲಿ ಅಮೆಜಾನ್ ಕಂಪನಿಯ ಅಧಿಕಾರಿಗಳು ದೂರು ನೀಡಿದ್ದಾರೆ. ಆದರೆ ಆರೋಪಿಗಳನ್ನು ಪತ್ತೆ ಮಾಡಿದ್ದು ಮಾತ್ರ ಯಶವಂತಪುರ ಠಾಣೆ ಪೊಲೀಸರು. ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ 13 ಜನರನ್ನು ಪತ್ತೆ ಮಾಡಿದ್ದು, ಬೆಂಗಳೂರಿನಲ್ಲೇ ನಾಲ್ಕೈದು ತಂಡ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Fri, 18 August 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!