AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು

ವಿಶ್ವದ ದೈತ್ಯ ಆನ್​ಲೈನ್​ ಕಂಪನಿಗೆ ಹ್ಯಾಕರ್​​ಗಳು ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Aug 18, 2023 | 12:32 PM

Share

ಬೆಂಗಳೂರು: ವಿಶ್ವದ ದೈತ್ಯ ಆನ್​ಲೈನ್ (Online)​ ಕಂಪನಿಗೆ ಹ್ಯಾಕರ್​​ಗಳು (Hackers) ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​ (Amazon)​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹ್ಯಾಕರ್​​​ಗಳು ವಿದೇಶದಲ್ಲಿದ್ದುಕೊಂಡು ಬೆಂಗಳೂರು, ಹೈದ್ರಾಬಾದ್, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳನ್ನು ತಮ್ಮ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಹ್ಯಾಕರ್​ಗಳು ಈ ವಿದ್ಯಾರ್ಥಿಗಳನ್ನು ಟೆಲಿಗ್ರಾಂ ಮೂಲಕವೇ ಸಂಪರ್ಕಿಸಿ ನಂತರ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಗಳನ್ನು ಟಾರ್ಗೆಟ್ ಮಾಡುವಂತೆ ಟಾಸ್ಕ್ ನೀಡುತ್ತಾರೆ. ಕೆಲಸವಾದ ಬಳಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಕೌಂಟ್ ಮೂಲಕವೇ ಹಣ ವರ್ಗಾಯಿಸಿಕೊಳ್ಳುತ್ತಾರೆ. ಹ್ಯಾಕರ್​ಗಳು ಇದೀಗ ಅಮೆಜಾನ್​​​ ನಂತಹ ದೊಡ್ಡ ಕಂಪನಿಯನ್ನ ಟಾರ್ಗೆಟ್​ ಮಾಡಿ ಕಂಪನಿಗೆ ಲಕ್ಷ ಲಕ್ಷ ರೂ. ವಂಚಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ಈ ಸಂಬಂಧ ದೇಶದ 25ಕ್ಕೂ ಹೆಚ್ಚು ಪೊಲೀಸ್​​ ಠಾಣೆಗಳಲ್ಲಿ ಅಮೆಜಾನ್ ಕಂಪನಿಯ ಅಧಿಕಾರಿಗಳು ದೂರು ನೀಡಿದ್ದಾರೆ. ಆದರೆ ಆರೋಪಿಗಳನ್ನು ಪತ್ತೆ ಮಾಡಿದ್ದು ಮಾತ್ರ ಯಶವಂತಪುರ ಠಾಣೆ ಪೊಲೀಸರು. ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ 13 ಜನರನ್ನು ಪತ್ತೆ ಮಾಡಿದ್ದು, ಬೆಂಗಳೂರಿನಲ್ಲೇ ನಾಲ್ಕೈದು ತಂಡ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Fri, 18 August 23

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು