Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು

ವಿಶ್ವದ ದೈತ್ಯ ಆನ್​ಲೈನ್​ ಕಂಪನಿಗೆ ಹ್ಯಾಕರ್​​ಗಳು ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Aug 18, 2023 | 12:32 PM

ಬೆಂಗಳೂರು: ವಿಶ್ವದ ದೈತ್ಯ ಆನ್​ಲೈನ್ (Online)​ ಕಂಪನಿಗೆ ಹ್ಯಾಕರ್​​ಗಳು (Hackers) ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​ (Amazon)​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹ್ಯಾಕರ್​​​ಗಳು ವಿದೇಶದಲ್ಲಿದ್ದುಕೊಂಡು ಬೆಂಗಳೂರು, ಹೈದ್ರಾಬಾದ್, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳನ್ನು ತಮ್ಮ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಹ್ಯಾಕರ್​ಗಳು ಈ ವಿದ್ಯಾರ್ಥಿಗಳನ್ನು ಟೆಲಿಗ್ರಾಂ ಮೂಲಕವೇ ಸಂಪರ್ಕಿಸಿ ನಂತರ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಗಳನ್ನು ಟಾರ್ಗೆಟ್ ಮಾಡುವಂತೆ ಟಾಸ್ಕ್ ನೀಡುತ್ತಾರೆ. ಕೆಲಸವಾದ ಬಳಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಕೌಂಟ್ ಮೂಲಕವೇ ಹಣ ವರ್ಗಾಯಿಸಿಕೊಳ್ಳುತ್ತಾರೆ. ಹ್ಯಾಕರ್​ಗಳು ಇದೀಗ ಅಮೆಜಾನ್​​​ ನಂತಹ ದೊಡ್ಡ ಕಂಪನಿಯನ್ನ ಟಾರ್ಗೆಟ್​ ಮಾಡಿ ಕಂಪನಿಗೆ ಲಕ್ಷ ಲಕ್ಷ ರೂ. ವಂಚಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ಈ ಸಂಬಂಧ ದೇಶದ 25ಕ್ಕೂ ಹೆಚ್ಚು ಪೊಲೀಸ್​​ ಠಾಣೆಗಳಲ್ಲಿ ಅಮೆಜಾನ್ ಕಂಪನಿಯ ಅಧಿಕಾರಿಗಳು ದೂರು ನೀಡಿದ್ದಾರೆ. ಆದರೆ ಆರೋಪಿಗಳನ್ನು ಪತ್ತೆ ಮಾಡಿದ್ದು ಮಾತ್ರ ಯಶವಂತಪುರ ಠಾಣೆ ಪೊಲೀಸರು. ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ 13 ಜನರನ್ನು ಪತ್ತೆ ಮಾಡಿದ್ದು, ಬೆಂಗಳೂರಿನಲ್ಲೇ ನಾಲ್ಕೈದು ತಂಡ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Fri, 18 August 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್