AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು

ವಿಶ್ವದ ದೈತ್ಯ ಆನ್​ಲೈನ್​ ಕಂಪನಿಗೆ ಹ್ಯಾಕರ್​​ಗಳು ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ.

ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Aug 18, 2023 | 12:32 PM

ಬೆಂಗಳೂರು: ವಿಶ್ವದ ದೈತ್ಯ ಆನ್​ಲೈನ್ (Online)​ ಕಂಪನಿಗೆ ಹ್ಯಾಕರ್​​ಗಳು (Hackers) ಕಂಟಕವಾಗಿದ್ದಾರೆ. ಅತಿದೊಡ್ಡ ಅಂತರಾಷ್ಟ್ರೀಯ ಕಂಪನಿಯಾಗಿರುವ ಅಮೆಜಾನ್​ (Amazon)​​ ಕಂಪನಿಯ ಅಕೌಂಟ್​​ ಅನ್ನು ಹ್ಯಾಕ್​ ಮಾಡಿ ಹ್ಯಾಕರ್​​​ಗಳು ಲಕ್ಷ ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಈ ಹ್ಯಾಕರ್​​ಗಳ ದೊಡ್ಡ ಜಾಲವೇ ಇದ್ದು, ಅಮೆಜಾನ್​ ಕಂಪನಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹ್ಯಾಕರ್​​​ಗಳು ವಿದೇಶದಲ್ಲಿದ್ದುಕೊಂಡು ಬೆಂಗಳೂರು, ಹೈದ್ರಾಬಾದ್, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳನ್ನು ತಮ್ಮ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಹ್ಯಾಕರ್​ಗಳು ಈ ವಿದ್ಯಾರ್ಥಿಗಳನ್ನು ಟೆಲಿಗ್ರಾಂ ಮೂಲಕವೇ ಸಂಪರ್ಕಿಸಿ ನಂತರ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಗಳನ್ನು ಟಾರ್ಗೆಟ್ ಮಾಡುವಂತೆ ಟಾಸ್ಕ್ ನೀಡುತ್ತಾರೆ. ಕೆಲಸವಾದ ಬಳಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಕೌಂಟ್ ಮೂಲಕವೇ ಹಣ ವರ್ಗಾಯಿಸಿಕೊಳ್ಳುತ್ತಾರೆ. ಹ್ಯಾಕರ್​ಗಳು ಇದೀಗ ಅಮೆಜಾನ್​​​ ನಂತಹ ದೊಡ್ಡ ಕಂಪನಿಯನ್ನ ಟಾರ್ಗೆಟ್​ ಮಾಡಿ ಕಂಪನಿಗೆ ಲಕ್ಷ ಲಕ್ಷ ರೂ. ವಂಚಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ಈ ಸಂಬಂಧ ದೇಶದ 25ಕ್ಕೂ ಹೆಚ್ಚು ಪೊಲೀಸ್​​ ಠಾಣೆಗಳಲ್ಲಿ ಅಮೆಜಾನ್ ಕಂಪನಿಯ ಅಧಿಕಾರಿಗಳು ದೂರು ನೀಡಿದ್ದಾರೆ. ಆದರೆ ಆರೋಪಿಗಳನ್ನು ಪತ್ತೆ ಮಾಡಿದ್ದು ಮಾತ್ರ ಯಶವಂತಪುರ ಠಾಣೆ ಪೊಲೀಸರು. ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ 13 ಜನರನ್ನು ಪತ್ತೆ ಮಾಡಿದ್ದು, ಬೆಂಗಳೂರಿನಲ್ಲೇ ನಾಲ್ಕೈದು ತಂಡ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Fri, 18 August 23

ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ