ಸೋದರರ ಗಾಂಜಾ ಮಾರಾಟ ಜಾಲ: HAL ಪೊಲೀಸರಿಂದ ಆರೋಪಿ ಅರೆಸ್ಟ್

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮಾರಾಟಗಾರ ಹಾವಳಿ ಹೆಚ್ಚಾಗಿದ್ದು, ಅಂತರ್ ರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಮುನಾವರ್ ಪಾಷಾ ಬಂಧಿತ ಆರೋಪಿ. ಎಲ್.ಬಿ.ಎಸ್ ನಗರದ ಇಸ್ಲಾಂಪುರ ಖಾಲಿ ಜಾಗದಲ್ಲಿ ಈತ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿಯು ವಿಶಾಖಪಟ್ಟಣ ಬಳಿ ಚಾಪರಾಯಿ ಫಾಲ್ಸ್ ಭಾಗದಿಂದ ಗಾಂಜಾ ಖರೀದಿಸುತ್ತಿದ್ದ. 5 ಸಾವಿರ ರೂಪಾಯಿಗೆ ಗಾಂಜಾ ತಂದು 15-20 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ 2ಕೆ.ಜಿ. 100 ಗ್ರಾಂ ತೂಕದ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]

ಸೋದರರ ಗಾಂಜಾ ಮಾರಾಟ ಜಾಲ: HAL ಪೊಲೀಸರಿಂದ ಆರೋಪಿ ಅರೆಸ್ಟ್
ಸಾಧು ಶ್ರೀನಾಥ್​

Updated on: Nov 25, 2019 | 5:29 PM

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮಾರಾಟಗಾರ ಹಾವಳಿ ಹೆಚ್ಚಾಗಿದ್ದು, ಅಂತರ್ ರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಮುನಾವರ್ ಪಾಷಾ ಬಂಧಿತ ಆರೋಪಿ.

ಎಲ್.ಬಿ.ಎಸ್ ನಗರದ ಇಸ್ಲಾಂಪುರ ಖಾಲಿ ಜಾಗದಲ್ಲಿ ಈತ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿಯು ವಿಶಾಖಪಟ್ಟಣ ಬಳಿ ಚಾಪರಾಯಿ ಫಾಲ್ಸ್ ಭಾಗದಿಂದ ಗಾಂಜಾ ಖರೀದಿಸುತ್ತಿದ್ದ. 5 ಸಾವಿರ ರೂಪಾಯಿಗೆ ಗಾಂಜಾ ತಂದು 15-20 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ 2ಕೆ.ಜಿ. 100 ಗ್ರಾಂ ತೂಕದ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ಸಹೋದರ ಮುಬಾರಕ್ ಪಾಷಾ ಕೂಡ ಗಾಂಜಾ ಮಾರಾಟ ಪ್ರಕರಣದಲ್ಲಿ‌ ಜೈಲು ಪಾಲಾಗಿದ್ದ. ಕೆ.ಜಿ ಹಳ್ಳಿ ಠಾಣೆ ಪೊಲೀಸರು ಇತ್ತೀಚೆಗಷ್ಟೆ ಬಂಧಿಸಿದ್ದರು. ಅಪಾರ ಪ್ರಮಾಣದ ಗಾಂಜಾ ಹಾಗೂ 2 ಕಂಟ್ರಿಮೇಡ್ ಪಿಸ್ತೂಲ್ ವಶಪಡಿಸಿಕೊಂಡಿದ್ದರು.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us