ಹಾಡಹಗಲೇ ಹರಿಯಿತು ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ HAL ನೌಕರನ ಬರ್ಬರ ಹತ್ಯೆ

ಬೆಂಗಳೂರು: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೀರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. HAL​ನಲ್ಲಿ‌ ಕೆಲಸ ಮಾಡುತ್ತಿದ್ದ ರಾಜೇಶ್ ಇಂದು ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮನೆಯಲ್ಲೇ‌‌ ಉಳಿದುಕೊಂಡಿದ್ದ. ಹೊರಗಡೆ ಹೊರಟಾಗ ಆತನ ಬೈಕ್ ಹಿಂಬಾಲಿಸಿ ಬಂದ ಹಂತಕರು ಚಾಕುವಿನಿಂದ ಇರಿದು ರಾಜೇಶ್​ನನ್ನು ಕೊಲೆಗೈದಿದ್ದಾರೆ. ಬಳಿಕ‌ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ […]

ಹಾಡಹಗಲೇ ಹರಿಯಿತು ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ HAL ನೌಕರನ ಬರ್ಬರ ಹತ್ಯೆ
Edited By:

Updated on: Sep 20, 2020 | 6:02 PM

ಬೆಂಗಳೂರು: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೀರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

HAL​ನಲ್ಲಿ‌ ಕೆಲಸ ಮಾಡುತ್ತಿದ್ದ ರಾಜೇಶ್ ಇಂದು ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮನೆಯಲ್ಲೇ‌‌ ಉಳಿದುಕೊಂಡಿದ್ದ. ಹೊರಗಡೆ ಹೊರಟಾಗ ಆತನ ಬೈಕ್ ಹಿಂಬಾಲಿಸಿ ಬಂದ ಹಂತಕರು ಚಾಕುವಿನಿಂದ ಇರಿದು ರಾಜೇಶ್​ನನ್ನು ಕೊಲೆಗೈದಿದ್ದಾರೆ. ಬಳಿಕ‌ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us