AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ
ಮೃತ ಯುವತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 19, 2024 | 4:18 PM

Share

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು

ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ ಜೊತೆಗೆ ಆರೋಪಿ ಮಾಲತೇಶ್ ಮದುವೆ ನಿಗದಿಯಾಗಿತ್ತು. ಆದರೆ, ದಿಢೀರ್​​ ಯುವತಿ ಕೊಲೆಯಾಗಿದ್ದು, ಎಲ್ಲರನ್ನೂ ಬೆಚ್ಚಿಬಿಳಿಸಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಪ್ರಕರಣ ಭೇದಿಸಿದ್ದಾರೆ. ಈ ಮೂಲಕ ಕೊಲೆ ನಡೆದು ಐದು ದಿನಗಳ ನಂತರ ಹತ್ಯೆ ಪ್ರಕರಣ ಬಯಲಾಗಿದೆ.

ಇದನ್ನೂ ಓದಿ:ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ಹತ್ಯೆಗೆ ಕಾರಣವೇನು?

ಇನ್ನು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಹತ್ಯೆಯ ಹಿಂದಿನ ಕಾರಣವನ್ನ ಬಾಯ್ಬಿಟ್ಟಿದ್ದಾನೆ. ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ಯುವತಿ ನಿರಾಕರಿಸಿದ್ದ ಹಿನ್ನಲೆ ಕೊಲೆ ಮಾಡಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ನನಗೆ ಮದುವೆಯಾಗಲು ಇಷ್ಟ ಇಲ್ಲ, ನಮ್ಮ ಮನೆಯವರ ಒತ್ತಾಯಕ್ಕೆ ಒಪ್ಪಿದ್ದೆನೆ, ಜೊತೆಗೆ ನೀನು ನನ್ನ ಮದುವೆಯಾದರೂ, ನಿನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಯುವತಿ ಹೇಳಿದ್ದಳಂತೆ. ಈ ಹಿನ್ನಲೆ ಯುವಕ ಆಕೆಗೆ ಎಷ್ಟೇ ಹೇಳಿದರೂ ಕೇಳದೆ ಇದ್ದಾಗ ಕೊಲೆ ಮಾಡಿದ್ದೆನೆ ಎಂದು ಯುವಕ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ