AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ
ಮೃತ ಯುವತಿ
TV9 Web
| Edited By: |

Updated on: Mar 19, 2024 | 4:18 PM

Share

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು

ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ ಜೊತೆಗೆ ಆರೋಪಿ ಮಾಲತೇಶ್ ಮದುವೆ ನಿಗದಿಯಾಗಿತ್ತು. ಆದರೆ, ದಿಢೀರ್​​ ಯುವತಿ ಕೊಲೆಯಾಗಿದ್ದು, ಎಲ್ಲರನ್ನೂ ಬೆಚ್ಚಿಬಿಳಿಸಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಪ್ರಕರಣ ಭೇದಿಸಿದ್ದಾರೆ. ಈ ಮೂಲಕ ಕೊಲೆ ನಡೆದು ಐದು ದಿನಗಳ ನಂತರ ಹತ್ಯೆ ಪ್ರಕರಣ ಬಯಲಾಗಿದೆ.

ಇದನ್ನೂ ಓದಿ:ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ಹತ್ಯೆಗೆ ಕಾರಣವೇನು?

ಇನ್ನು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಹತ್ಯೆಯ ಹಿಂದಿನ ಕಾರಣವನ್ನ ಬಾಯ್ಬಿಟ್ಟಿದ್ದಾನೆ. ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ಯುವತಿ ನಿರಾಕರಿಸಿದ್ದ ಹಿನ್ನಲೆ ಕೊಲೆ ಮಾಡಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ನನಗೆ ಮದುವೆಯಾಗಲು ಇಷ್ಟ ಇಲ್ಲ, ನಮ್ಮ ಮನೆಯವರ ಒತ್ತಾಯಕ್ಕೆ ಒಪ್ಪಿದ್ದೆನೆ, ಜೊತೆಗೆ ನೀನು ನನ್ನ ಮದುವೆಯಾದರೂ, ನಿನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಯುವತಿ ಹೇಳಿದ್ದಳಂತೆ. ಈ ಹಿನ್ನಲೆ ಯುವಕ ಆಕೆಗೆ ಎಷ್ಟೇ ಹೇಳಿದರೂ ಕೇಳದೆ ಇದ್ದಾಗ ಕೊಲೆ ಮಾಡಿದ್ದೆನೆ ಎಂದು ಯುವಕ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ