Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ
ಮೃತ ಯುವತಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 19, 2024 | 4:18 PM

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು

ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ ಜೊತೆಗೆ ಆರೋಪಿ ಮಾಲತೇಶ್ ಮದುವೆ ನಿಗದಿಯಾಗಿತ್ತು. ಆದರೆ, ದಿಢೀರ್​​ ಯುವತಿ ಕೊಲೆಯಾಗಿದ್ದು, ಎಲ್ಲರನ್ನೂ ಬೆಚ್ಚಿಬಿಳಿಸಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಪ್ರಕರಣ ಭೇದಿಸಿದ್ದಾರೆ. ಈ ಮೂಲಕ ಕೊಲೆ ನಡೆದು ಐದು ದಿನಗಳ ನಂತರ ಹತ್ಯೆ ಪ್ರಕರಣ ಬಯಲಾಗಿದೆ.

ಇದನ್ನೂ ಓದಿ:ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ಹತ್ಯೆಗೆ ಕಾರಣವೇನು?

ಇನ್ನು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಹತ್ಯೆಯ ಹಿಂದಿನ ಕಾರಣವನ್ನ ಬಾಯ್ಬಿಟ್ಟಿದ್ದಾನೆ. ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ಯುವತಿ ನಿರಾಕರಿಸಿದ್ದ ಹಿನ್ನಲೆ ಕೊಲೆ ಮಾಡಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ನನಗೆ ಮದುವೆಯಾಗಲು ಇಷ್ಟ ಇಲ್ಲ, ನಮ್ಮ ಮನೆಯವರ ಒತ್ತಾಯಕ್ಕೆ ಒಪ್ಪಿದ್ದೆನೆ, ಜೊತೆಗೆ ನೀನು ನನ್ನ ಮದುವೆಯಾದರೂ, ನಿನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಯುವತಿ ಹೇಳಿದ್ದಳಂತೆ. ಈ ಹಿನ್ನಲೆ ಯುವಕ ಆಕೆಗೆ ಎಷ್ಟೇ ಹೇಳಿದರೂ ಕೇಳದೆ ಇದ್ದಾಗ ಕೊಲೆ ಮಾಡಿದ್ದೆನೆ ಎಂದು ಯುವಕ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ