ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ.

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ
ಮೃತ ಯುವತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 19, 2024 | 4:18 PM

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal) ಹೊರವಲಯದಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು

ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ ಜೊತೆಗೆ ಆರೋಪಿ ಮಾಲತೇಶ್ ಮದುವೆ ನಿಗದಿಯಾಗಿತ್ತು. ಆದರೆ, ದಿಢೀರ್​​ ಯುವತಿ ಕೊಲೆಯಾಗಿದ್ದು, ಎಲ್ಲರನ್ನೂ ಬೆಚ್ಚಿಬಿಳಿಸಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಪ್ರಕರಣ ಭೇದಿಸಿದ್ದಾರೆ. ಈ ಮೂಲಕ ಕೊಲೆ ನಡೆದು ಐದು ದಿನಗಳ ನಂತರ ಹತ್ಯೆ ಪ್ರಕರಣ ಬಯಲಾಗಿದೆ.

ಇದನ್ನೂ ಓದಿ:ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ಹತ್ಯೆಗೆ ಕಾರಣವೇನು?

ಇನ್ನು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಹತ್ಯೆಯ ಹಿಂದಿನ ಕಾರಣವನ್ನ ಬಾಯ್ಬಿಟ್ಟಿದ್ದಾನೆ. ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ಯುವತಿ ನಿರಾಕರಿಸಿದ್ದ ಹಿನ್ನಲೆ ಕೊಲೆ ಮಾಡಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ನನಗೆ ಮದುವೆಯಾಗಲು ಇಷ್ಟ ಇಲ್ಲ, ನಮ್ಮ ಮನೆಯವರ ಒತ್ತಾಯಕ್ಕೆ ಒಪ್ಪಿದ್ದೆನೆ, ಜೊತೆಗೆ ನೀನು ನನ್ನ ಮದುವೆಯಾದರೂ, ನಿನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಯುವತಿ ಹೇಳಿದ್ದಳಂತೆ. ಈ ಹಿನ್ನಲೆ ಯುವಕ ಆಕೆಗೆ ಎಷ್ಟೇ ಹೇಳಿದರೂ ಕೇಳದೆ ಇದ್ದಾಗ ಕೊಲೆ ಮಾಡಿದ್ದೆನೆ ಎಂದು ಯುವಕ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us