Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಾಂಗ ಮಗನನ್ನು ನಿಂದಿಸಿದಕ್ಕೆ ಅಣ್ಣನ ಮಗನ ಕೊಲೆ; ಆರು ತಿಂಗಳಿಂದ ಹೊಂಚು ಹಾಕಿ ಮರ್ಡರ್

 ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ದುರ್ಗಮ್ಮ ದೇವಿಯ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿತ್ತು. ಗ್ರಾಮದ ಜನರೆಲ್ಲಾ ದುರ್ಗಾದೇವಿ ಗುಡಿ ಮುಂದೆ ನೆಲೆಸಿದ್ದರು. ಆದರೆ, ಓರ್ವ ಮಾತ್ರ ತನ್ನ ಆರು ತಿಂಗಳ ಸೇಡು ತಿರಿಸಿಕೊಳ್ಳಲು ಹೊಂಚು ಹಾಕಿದ್ದ. ಏಣ್ಣೇ ಏಟಿನಲ್ಲಿ ಮಲಗಿದ್ದ ಅಣ್ಣನ ಮಗನನ್ನು ಮಸಣಕ್ಕೆ ಕಳಸಿ, ಏನು ಆಗಿಲ್ಲ ಎಂಬಂತೆ ದೇವಿ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದ.

ವಿಕಲಾಂಗ ಮಗನನ್ನು ನಿಂದಿಸಿದಕ್ಕೆ ಅಣ್ಣನ ಮಗನ ಕೊಲೆ; ಆರು ತಿಂಗಳಿಂದ ಹೊಂಚು ಹಾಕಿ ಮರ್ಡರ್
ಹಾನಗಲ್​ ಅಣ್ಣನ ಮಗನ ಕೊಲೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 14, 2024 | 8:59 PM

ಹಾವೇರಿ, ಫೆ.14: ಜಿಲ್ಲೆಯ ಹಾನಗಲ್(Hangal) ತಾಲೂಕಿನ ಮಲಗುಂದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದರು. ರಾತ್ರಿಯಿಡೀ ಗ್ರಾಮದಲ್ಲಿ ಸಂಭ್ರಮದಿಂದ ದುರ್ಗಮ್ಮ ದೇವಿ ಜಾತ್ರೆ ಮಾಡಿ ಮಲಗಿದ್ದ ಜನರಿಗೆ ಬೆಳಗ್ಗೆ ಗ್ರಾಮದಲ್ಲಿ ವ್ಯಕ್ತಿಯ ಕೊಲೆಯಾಗಿದೆ ಎನ್ನುವ ಸುದ್ದಿ ಕೇಳಿ ಬೆಚ್ಚಿ ಬಿದ್ದಿದ್ದರು. ಹೀಗೆ ರಕ್ತದ ಮಡುವಿನಲ್ಲಿ ಹೆಣವಾಗಿ ಮಲಗಿರುವ ವ್ಯಕ್ತಿಯ ಹೆಸರು ಯಲ್ಲಪ್ಪ ದೊಡ್ಡಕೋವಿ. ಮದುವೆಯಾಗಿ ಹೆಂಡತಿ ಮಕ್ಕಳು ಇದ್ದರೂ ಕೂಡ ಏಕಾಂಗಿಯಾಗಿ ಗ್ರಾಮದಲ್ಲಿ ವಾಸವಾಗಿದ್ದ. ಇತನಿಗೆ ಅಣ್ಣಾ ಹಜಾರೆ ಎಂದು ಗ್ರಾಮದ ಜನರು ಕರೆಯುತ್ತಿದ್ದರು. ಆದರೆ, ಆರೋಪಿ ಪಕ್ಕಿರಪ್ಪ ದೊಡ್ಡಕೋವಿ, ಮೃತ ಯಲ್ಲಪ್ಪನಿಗೆ ಚಿಕ್ಕಪ್ಪನಾಗಬೇಕು. ಆರು ತಿಂಗಳ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳ ಮಾಡಿಕೊಂಡಿದ್ದರು. ಇದನ್ನೆ ಮನಸಿನಲ್ಲಿ ಇಟ್ಟುಕೊಂಡು ಇತ ನಿನ್ನೆ(ಫೆ.13) ಯಾರು ಇಲ್ಲದಿರುವಾಗ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಮನೆಯವರು ಎಲ್ಲರೂ ದೇವಸ್ಥಾನಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಪಕ್ಕಿರಪ್ಪ, ಮನೆಯ ಜಗುಲಿ ಮುಂದೆ ಮಲಗಿದ್ದ. ಯಲ್ಲಪನನ್ನು ಕಂಡು ಕೊಲೆ ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ. ಮೊದಲೇ ಕುಡಿದಿದ್ದ ಪಕ್ಕಿರಪ್ಪ, ಮತ್ತೆ ಸ್ವಲ್ಪ ಕುಡಿದು ಬಂದು ಮಲಗಿದ್ದ ಯಲ್ಲಪ್ಪನಿಗೆ ಇಟ್ಟಿಗೆಯಿಂದ ತಲೆಗೆ ಹೊಡೆದು ಆತನ ಉಸಿರು ನಿಲ್ಲಿಸಿದ್ದಾನೆ. ಇಷ್ಟಾದರೂ ಅಣ್ಣನ ಮಗನ ಕೊಲೆ ಮಾಡಿದ ಕಿರಾತಕ, ದುರ್ಗಾದೇವಿ ಜಾತ್ರೆಯ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದಾನೆ. ಆದರೆ, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಡೂರು ಪೊಲೀಸರು, ಪಕ್ಕಿರಪ್ಪನ ಕೈ ಅಂಟಿರುವ ರಕ್ತದ ವಾಸನೆ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.

ಇದನ್ನೂ ಓದಿ:ಧಾರವಾಡದಲ್ಲಿ ಚಿಕ್ಕಮ್ಮನನ್ನೇ ಕೊಂದ ಕೊಲೆಗಾರ ಅಂದರ್​; ಹತ್ಯೆಗೆ ಕಾರಣ ಬಾಯ್ಬಿಟ್ಟ ಹಂತಕ

ಒಟ್ಟಾರೆ ಕ್ಷುಲ್ಲಕ ಕಾರಣಕ್ಕೆ ಇಳಿ ವಯಸ್ಸಿನಲ್ಲಿ ಮೊಮ್ಮಕಳನ್ನು ಆಡಿಸುತ್ತಾ ಕಾಲ ಕಳೆಯಬೇಕಾಗಿದ್ದ ವ್ಯಕ್ತಿ ಕಂಬಿ ಏಣಿಸುವಂತ ಸ್ಥಿತಿ ತಂದುಕೊಂಡಿದ್ದಾನೆ. ಇನ್ನೊಂದೆಡೆ ಬಾಳಿ ಬದುಕಬೇಕಾಗಿದ್ದ ಅಣ್ಣನ ಮಗ ಮಸಣ ಸೇರಿದ್ದಾನೆ. ವಿಕಲಾಂಗ ಮಗನನ್ನು ತಮಾಷೆಗಾಗಿ ನಿಂದಿಸಿದಕ್ಕೆ, ಅದನ್ನೇ ದೊಡ್ಡದಾಗಿ ತೆಗೆದುಕೊಂಡು, ಬರೊಬ್ಬರಿ ಆರು ತಿಂಗಳು ಹೊಂಚು ಹಾಕಿ ಅಣ್ಣನ ಮಗನನ್ನು ಕೊಲೆ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Wed, 14 February 24

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ