AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

ಭದೋಹಿಯ ಪುರಾತನ ಹನುಮಾನ್ ದೇವಾಲಯದಲ್ಲಿ 75 ವರ್ಷದ ಅರ್ಚಕನನ್ನು ಕೊಲೆ ಮಾಡಲಾಗಿದ್ದು, ದೇವಸ್ಥಾನದಲ್ಲೇ ಅವರ ಶವ ಪತ್ತೆಯಾಗಿದೆ. ಕಳ್ಳತನದ ಬಗ್ಗೆ ಹಲವು ಬಾರಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ವಿವರವಾದ ತನಿಖೆ ನಡೆಯುತ್ತಿದೆ.

ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು
ಕೊಲೆ
ಸುಷ್ಮಾ ಚಕ್ರೆ
|

Updated on: Oct 01, 2024 | 7:58 PM

Share

ನವದೆಹಲಿ: 75 ವರ್ಷದ ಅರ್ಚಕ ಸೀತಾರಾಮ್ ಎಂಬುವವರ ಶವ ಸೋಮವಾರ ಭದೋಹಿಯ ಸುರಿಯಾವದಲ್ಲಿರುವ ಪುರಾತನ ಹನುಮಾನ್ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ಕತ್ತು ಸೀಳಿ ದೇವಸ್ಥಾನದ ಆವರಣದಲ್ಲೇ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದಲ್ಲಿ ಕಳ್ಳತನ ಹಾಗೂ ಹಲವು ಜನರು ಗುಂಪು ಸೇರುತ್ತಿರುವ ಬಗ್ಗೆ ಅರ್ಚಕ ಪೊಲೀಸರಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ದೇವಸ್ಥಾನದಲ್ಲಿದ್ದ ಹಲವು ಕಾಣಿಕೆ ಡಬ್ಬಗಳೂ ನಾಪತ್ತೆಯಾಗಿದ್ದವು.

ಅರ್ಚಕರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲು ವಿಫಲರಾದ ಸೂರ್ಯಾವದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಪೊಲೀಸ್ ತನಿಖೆ ಆರಂಭಿಸಲಾಗಿದೆ. ದೇವಸ್ಥಾನದ ಬಳಿ ದರೋಡೆ ಮತ್ತು ಸಮಾಜ ವಿರೋಧಿ ಗುಂಪುಗಳ ಬಗ್ಗೆ ಪೊಲೀಸರಿಗೆ ಈ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ, ಅವುಗಳನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅರ್ಚಕನನ್ನೇ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ, ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು

ಈ ಪ್ರಕರಣವನ್ನು ನಿಭಾಯಿಸಲು 5 ತಂಡಗಳನ್ನು ರಚಿಸಲಾಗಿದೆ ಎಂದು ಭದೋಹಿಯ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಹೇಳಿದ್ದಾರೆ. ಫೋರೆನ್ಸಿಕ್ ತಜ್ಞರು ಅಪರಾಧದ ಸ್ಥಳವನ್ನು ಪರಿಶೀಲಿಸಿದರು. ಅರ್ಚಕನನ್ನು ಕೊಲೆ ಮಾಡಿ ಬಿಸಾಡಲಾಗಿತ್ತು. ಅಪರಾಧ ಎಸಗಿದವರನ್ನು ಗುರುತಿಸಿ ಬಂಧಿಸಲು ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು