AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

ಭದೋಹಿಯ ಪುರಾತನ ಹನುಮಾನ್ ದೇವಾಲಯದಲ್ಲಿ 75 ವರ್ಷದ ಅರ್ಚಕನನ್ನು ಕೊಲೆ ಮಾಡಲಾಗಿದ್ದು, ದೇವಸ್ಥಾನದಲ್ಲೇ ಅವರ ಶವ ಪತ್ತೆಯಾಗಿದೆ. ಕಳ್ಳತನದ ಬಗ್ಗೆ ಹಲವು ಬಾರಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ವಿವರವಾದ ತನಿಖೆ ನಡೆಯುತ್ತಿದೆ.

ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು
ಕೊಲೆ
ಸುಷ್ಮಾ ಚಕ್ರೆ
|

Updated on: Oct 01, 2024 | 7:58 PM

Share

ನವದೆಹಲಿ: 75 ವರ್ಷದ ಅರ್ಚಕ ಸೀತಾರಾಮ್ ಎಂಬುವವರ ಶವ ಸೋಮವಾರ ಭದೋಹಿಯ ಸುರಿಯಾವದಲ್ಲಿರುವ ಪುರಾತನ ಹನುಮಾನ್ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ಕತ್ತು ಸೀಳಿ ದೇವಸ್ಥಾನದ ಆವರಣದಲ್ಲೇ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದಲ್ಲಿ ಕಳ್ಳತನ ಹಾಗೂ ಹಲವು ಜನರು ಗುಂಪು ಸೇರುತ್ತಿರುವ ಬಗ್ಗೆ ಅರ್ಚಕ ಪೊಲೀಸರಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ದೇವಸ್ಥಾನದಲ್ಲಿದ್ದ ಹಲವು ಕಾಣಿಕೆ ಡಬ್ಬಗಳೂ ನಾಪತ್ತೆಯಾಗಿದ್ದವು.

ಅರ್ಚಕರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲು ವಿಫಲರಾದ ಸೂರ್ಯಾವದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಪೊಲೀಸ್ ತನಿಖೆ ಆರಂಭಿಸಲಾಗಿದೆ. ದೇವಸ್ಥಾನದ ಬಳಿ ದರೋಡೆ ಮತ್ತು ಸಮಾಜ ವಿರೋಧಿ ಗುಂಪುಗಳ ಬಗ್ಗೆ ಪೊಲೀಸರಿಗೆ ಈ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ, ಅವುಗಳನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅರ್ಚಕನನ್ನೇ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ, ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು

ಈ ಪ್ರಕರಣವನ್ನು ನಿಭಾಯಿಸಲು 5 ತಂಡಗಳನ್ನು ರಚಿಸಲಾಗಿದೆ ಎಂದು ಭದೋಹಿಯ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಹೇಳಿದ್ದಾರೆ. ಫೋರೆನ್ಸಿಕ್ ತಜ್ಞರು ಅಪರಾಧದ ಸ್ಥಳವನ್ನು ಪರಿಶೀಲಿಸಿದರು. ಅರ್ಚಕನನ್ನು ಕೊಲೆ ಮಾಡಿ ಬಿಸಾಡಲಾಗಿತ್ತು. ಅಪರಾಧ ಎಸಗಿದವರನ್ನು ಗುರುತಿಸಿ ಬಂಧಿಸಲು ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ