ಹರಿಯಾಣದ ಸೋನೆಪತ್‌ನಲ್ಲಿ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

|

Updated on: Mar 15, 2025 | 5:04 PM

ಹರಿಯಾಣದ ಸೋನೆಪತ್‌ನಲ್ಲಿರುವ ಜವಾಹರ್ ಗ್ರಾಮದಲ್ಲಿ ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಲೆಯಾಗಿರುವ ವ್ಯಕ್ತಿ ನೆರೆಯವರ ಚಿಕ್ಕಮ್ಮನ ಹೆಸರಿನಲ್ಲಿ ಭೂಮಿ ಖರೀದಿಸಿದ್ದರು. ಸುರೇಂದ್ರ ಜವಾಹರ್ ತನ್ನ ಜೀವ ಉಳಿಸಿಕೊಳ್ಳಲು ಅಂಗಡಿಯೊಂದಕ್ಕೆ ನುಗ್ಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. 42 ವರ್ಷದ ಸ್ಥಳೀಯ ಬಿಜೆಪಿ ನಾಯಕನನ್ನು ಭೂ ವಿವಾದಕ್ಕೆ ಸಂಬಂಧಿಸಿದಂತೆ ಸೋನೆಪತ್ ಜಿಲ್ಲೆಯಲ್ಲಿ ಅವರ ನೆರೆಯವರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಹರಿಯಾಣದ ಸೋನೆಪತ್‌ನಲ್ಲಿ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ
Surendra Jawahar
Follow us on

ಹರಿಯಾಣ, (ಮಾರ್ಚ್ 14): ಭೂ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕನನ್ನು ನಿನ್ನೆ ರಾತ್ರಿ 9.30ರ ಸುಮಾರಿಗೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೋನಿಪತ್‌ನ ಬಿಜೆಪಿಯ ಮುಂಡ್ಲಾನಾ ಮಂಡಲದ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರುತಿಸಲಾಗಿದೆ. ಮೃತರು ನೆರೆಯವರ ಚಿಕ್ಕಮ್ಮನ ಹೆಸರಿನಲ್ಲಿ ಭೂಮಿಯನ್ನು ಖರೀದಿಸಿದ್ದರು. ಶುಕ್ರವಾರ ರಾತ್ರಿ ಅಪರಿಚಿತ ದುಷ್ಕರ್ಮಿ ಜವಾಹರ್ ಅವರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಕೋರರು ಅವರ ಬೆನ್ನಟ್ಟಿ ಗುಂಡು ಹಾರಿಸಿ ಕೊಲ್ಲುವಾಗಲೂ ಜವಾಹರ್ ತನ್ನ ಜೀವವನ್ನು ಉಳಿಸಿಕೊಳ್ಳಲು ಅಂಗಡಿಯೊಂದಕ್ಕೆ ನುಗ್ಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳಲ್ಲಿ ನೋಡಬಹುದು.

ಸೋನಿಪತ್‌ನಲ್ಲಿರುವ ಬಿಜೆಪಿಯ ಮುಂಡ್ಲಾನಾ ಮಂಡಲದ ಅಧ್ಯಕ್ಷ ಸುರೇಂದ್ರ ಜವಾಹರ್, ಭೂಕಂದಾಯ ಸಂಗ್ರಹ ಮತ್ತು ಭೂ ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿಯುತ ‘ನಂಬರ್ದಾರ್’ ಅಥವಾ ಗ್ರಾಮದ ಮುಖ್ಯಸ್ಥರೂ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಭೂ ವಿವಾದದ ಹಿನ್ನೆಲೆಯಲ್ಲಿ ಅವರ ಕೊಲೆ ನಡೆದಿದೆ. ಗೋಹಾನದ ಸಹಾಯಕ ಪೊಲೀಸ್ ಆಯುಕ್ತ (ಅಪರಾಧ) ರಿಷಿ ಕಾಂತ್ ಅವರು ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಆರೋಪಿಯ ವಿಚಾರಣೆ ನಡೆಯುತ್ತಿದೆ. ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿದ್ದು, ಕೊಲೆಯಾದ ವ್ಯಕ್ತಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನಿಂದ ಭೂಮಿ ಖರೀದಿಸಿದ್ದ. ಅವರ ಮಧ್ಯೆ ಜಗಳವಿತ್ತು, ಅದಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: Viral: ಸರ್ಕಾರಿ ಕೆಲಸಕ್ಕಾಗಿ ಗಂಡನನ್ನೇ ಕೊಂದ ಹೆಂಡತಿ; ಪೊಲೀಸ್‌ ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

ಜವಾಹರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾನ್ಪುರ್ ಕಲಾನ್‌ನಲ್ಲಿರುವ ಭಗತ್ ಫೂಲ್ ಸಿಂಗ್ ಮಹಿಳಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಸುರೇಂದ್ರ ಜವಾಹರ್ ಬಿಜೆಪಿ ಸೇರುವ ಮೊದಲು ಐಎನ್‌ಎಲ್‌ಡಿಯಲ್ಲಿದ್ದರು. 2021ರಲ್ಲಿ ಅವರು ಪಂಚಾಯತಿ ರಾಜ್ ವಿಭಾಗದಲ್ಲಿ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿದ್ದರು.

ಭೂಮಿ ಖರೀದಿಸಲು ಸುರೇಂದ್ರ ಮನ್ನುವಿಗೆ 5 ಲಕ್ಷ ರೂ. ನೀಡಿದ್ದರು. ಮನ್ನು ತನ್ನ ಹೆಸರಿಗೆ ಭೂಮಿಯನ್ನು ವರ್ಗಾಯಿಸಲು ನಿರಾಕರಿಸುತ್ತಿದ್ದರು. ಸೋನಿಪತ್ ಪೊಲೀಸರು ಆರೋಪಿ ಮನ್ನುವನ್ನು ಬಂಧಿಸಿ ಈ ವಿಷಯವನ್ನು ಗಂಭೀರವಾಗಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ