AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಾಲುಗಳ ಮುರಿದು ಕೊಂದ ದುಷ್ಟ

ವ್ಯಕ್ತಿಯೊಬ್ಬ ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಹರ್ಯಾಣದಲ್ಲಿ ನಡೆದಿದೆ. ನೂಹ್ ಜಿಲ್ಲೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕಾಲುಗಳನ್ನು ಮುರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಾಲುಗಳ ಮುರಿದು ಕೊಂದ ದುಷ್ಟ
ಮಗುImage Credit source: unsplash
ನಯನಾ ರಾಜೀವ್
|

Updated on: Dec 02, 2024 | 1:56 PM

Share

ವ್ಯಕ್ತಿಯೊಬ್ಬ ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಹರ್ಯಾಣದಲ್ಲಿ ನಡೆದಿದೆ. ನೂಹ್ ಜಿಲ್ಲೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕಾಲುಗಳನ್ನು ಮುರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿ ಆಟವಾಡುತ್ತಿದ್ದಾಗ ಸುಮಾರು ಸಂಜೆ 4 ಗಂಟೆ ಸುಮಾರಿಗೆ ಆಕೆಯನ್ನು ಅಪಹರಿಸಿದ್ದಾರೆ. ಬಾಲಕಿ ಎಷ್ಟೊತ್ತಾದರೂ ಅಲ್ಲೆಲ್ಲೂ ಕಾಣಿಸದ ಕಾರಣ ಮನೆಯವರು ಹುಡುಕಾಡಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಆಕೆಯ ರಕ್ತಸಿಕ್ತ ದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಿದ ನಂತರ, ಪಿನಾಂಗ್ವಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಗುವಿನ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅತ್ಯಾಚಾರವೆಸಗಿದ ಮೇಲೆ ಆರೋಪಿ ಆಕೆಯ ಕೈಕಾಲು ಮುರಿದು ಶವವನ್ನು ಎಸೆದಿದ್ದಾನೆ. ಪ್ರಾಥಮಿಕ ತನಿಖೆಯಿಂದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಮಹಿಳೆ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ, 2 ದಿನಗಳಲ್ಲಿ ನಾಲ್ಕನೇ ಘಟನೆ

ನಾಲ್ಕು ತಂಡಗಳನ್ನು ರಚಿಸಿ ಆರೋಪಿಯನ್ನು ಮರೋರ ಗ್ರಾಮದ ಬಳಿ ಬಂಧಿಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪಿನಂಗ್ವಾ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಸುಭಾಷ್ ಚಂದ್ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣ 6 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಕ್ತಿಯೊಬ್ಬ ತನ್ನ ಆರು ವರ್ಷದ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ನವೆಂಬರ್ 22 ರಂದು ಪೊಲೀಸ್ ದೂರಿನಲ್ಲಿ ಆರೋಪಿಯ ಪತ್ನಿ ಬುಲಂದ್‌ಶಹರ್‌ನಲ್ಲಿರುವ ಸಂಬಂಧಿಕರ ಸ್ಥಳದಿಂದ ಮನೆಗೆ ಹಿಂದಿರುಗಿದಾಗ ರೂಮಿನಿಂದ ಮಗಳ ಅಳಲು ಕೇಳಿದೆ ಎಂದು ಹೇಳಿದ್ದಾರೆ. ಅದೇ ಪರಿಸ್ಥಿತಿ ಹಲವು ಬಾರಿ ಸಂಭವಿಸಿದೆ ಎಂದು ಮಗಳು ಹೇಳಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು