AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ
ವೈದ್ಯImage Credit source: India Today
ನಯನಾ ರಾಜೀವ್
|

Updated on: Aug 28, 2023 | 12:25 PM

Share

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಅದನ್ನು ಪ್ರಶ್ನಿಸಲು ಕಾರಿನಿಂದ ಕೆಳಗಿಳಿದಿದ್ದ ಸಂದರ್ಭದಲ್ಲಿ ಕಾರು ಚಾಲಕ ವೈದ್ಯರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 50 ಮೀಟರ್​ನಷ್ಟು ದೂರ ಎಳೆದೊಯ್ದಿದ್ದಾನೆ.

ಗಗನ್ ಗಾರ್ಗ್ ಎಂದು ಗುರುತಿಸಲಾಗಿರುವ ವೈದ್ಯ, ಸೆಕ್ಟರ್ 4 ಮಾನಸಾ ದೇವಿ ಕಾಂಪ್ಲೆಕ್ಸ್‌ನ ನಿವಾಸಿಯಾಗಿದ್ದು, ಪಂಚಕುಲದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಕರ್ ಮಲಿಕ್ ಎಂದು ಗುರುತಿಸಲಾದ ಆರೋಪಿಯು ತನಗೆ ಬೆದರಿಕೆ ಹಾಕಿ ಚಾಕುವನ್ನು ಸಹ ತೋರಿಸಿದ್ದಾನೆ ಎಂದು ಗಾರ್ಗ್ ಹೇಳಿದರು. ಇದೀಗ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವಕನೊಬ್ಬ ಘಟನೆಯ ಸಂಪೂರ್ಣ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಗನ್ ಅವರನ್ನು ಸೆಕ್ಟರ್ 6ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್