AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್​ಐ ನಿಷೇಧದ ಬಳಿಕವೂ ದುಷ್ಕೃತ್ಯಕ್ಕೆ ಸಂಚು; ಮಂಗಳೂರಿನಲ್ಲಿ ಐವರು ಅರೆಸ್ಟ್

ಪಿಎಫ್​ಐ ಸಂಘಟನೆ ನಿಷೇಧಗೊಂಡರೂ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಐವರನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪಿಎಫ್​ಐ ನಿಷೇಧದ ಬಳಿಕವೂ ದುಷ್ಕೃತ್ಯಕ್ಕೆ ಸಂಚು; ಮಂಗಳೂರಿನಲ್ಲಿ ಐವರು ಅರೆಸ್ಟ್
ಮಂಗಳೂರಿನಲ್ಲಿ ಪಿಎಫ್​ಐಗೆ ಸೇರಿದ ಐವರ ಬಂಧನ
TV9 Web
| Updated By: Rakesh Nayak Manchi|

Updated on:Oct 20, 2022 | 4:05 PM

Share

ಹಾಸನ: ಪಿಎಫ್​ಐ ಸಂಘಟನೆ ನಿಷೇಧಗೊಂಡರೂ ಬುದ್ಧಿ ಬಾರದ ದುಷ್ಕರ್ಮಿಗಳು ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ಸಂಘಟನೆ ಬ್ಯಾನ್ ನಂತರವೂ ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದೆ. ವಿಶೇಷವಾಗಿ ಆರೋಪಿಗಳಿಗೆ  ಯಾರ ಜೊತೆ ಸಂಪರ್ಕ ಇತ್ತು, ಎಲ್ಲೆಲ್ಲಿ ತರಬೇತಿ ನೀಡುತ್ತಿದ್ದರು, ಯಾವ ರೀತಿ ಸಂಚು ರೂಪಿಸಿದ್ದರು ಎಂಬಿತ್ಯಾದಿ ಆಯಾಮಗಳಲ್ಲಿ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಕಾನೂನು ಇತಿಮಿಯಲ್ಲಿ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ತಡೆ ಇರುವುದಿಲ್ಲ. ಕಾನೂನು ಮೀರಿ ಯಾರಾದರು ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪಿಎಫ್​ಐ ಸಂಘಟನೆ ಬ್ಯಾನ್ ಆಗಿದ್ದರೂ ಅವರ ಮೇಲೆ ನಾವು ಕಣ್ಣು ಇಟ್ಟಿದ್ದೇವೆ. ಕರಾವಳಿ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ ವಿಚಾರಗಳನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಪುತ್ತೂರಿನಲ್ಲಿ ನಡೆಯುತ್ತಿದ್ದ ತರಬೇತಿ ‌ಬಿಟ್ಟು ಬೇರೆ ಬೇರೆ ಕಡೆ ಎಲ್ಲೆಲ್ಲಿ ತರಬೇತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು. ಇದಕ್ಕೂ ಮುನ್ನ ಎಡಿಜಿಪಿ ಅಲೋಕ್‌ಕುಮಾರ್ ಅವರು ಹಾಸನಾಂಬೆ ದೇವಿ ದರ್ಶನ ಪಡೆದರು. ಈ ವೇಳೆ ಎಸ್​ಪಿ ಹರಿರಾಂ ಶಂಕರ್, ಎ‌ಎಸ್‌ಪಿ ಮಿಥುನ್, ಡಿವೈಎಸ್‌ಪಿ ಉದಯ್‌ಭಾಸ್ಕರ್ ಇದ್ದರು.

ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಪಿಎಫ್​ಐ ಸಂಚು

ಬೆಂಗಳೂರು: ಪಿಎಫ್ಐ ದೇಶದ್ರೋಹಿ ಸಂಘಟನೆಯಾಗಿದ್ದು, ಮುಂಬೈ ದಾಳಿ ಮಾದರಿಯಲ್ಲಿ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧ್ವಂಸಕ ಕೃತ್ಯ ಮಾಡುವ ಪಿಎಫ್​ಐನ ಷಡ್ಯಂತ್ರ ಬಯಲಾಗಿದೆ. ಭಾರತದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದೆ. ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಎಂದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Thu, 20 October 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು