Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆಗೆ ಒಪ್ಪದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ

ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ದುರುಳರು ಅಪಹರಿಸಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಗುರುವಾರ ಬೆಳಗ್ಗೆ ಶಿಕ್ಷಕಿ ಶಾಲೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಶಿಕ್ಷಕಿಯ ಸಂಬಂಧಿ ರಾಮು ಎಂಬುವರು ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಹಾಸನ: ಮದುವೆಗೆ ಒಪ್ಪದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ
ಶಿಕ್ಷಕಿ ಅರ್ಪಿತಾ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Nov 30, 2023 | 11:36 AM

ಹಾಸನ ನ.30: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು (Teacher) ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ (Kidnap) ಘಟನೆ ಹಾಸನ (Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. 15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ. ಮದುವೆ ಒಪ್ಪದ ಹಿನ್ನೆಲೆಯಲ್ಲಿ ಇಂದು (ನ.30) ಬೆಳಗ್ಗೆ ಅರ್ಪಿತಾ ಅವರನ್ನು ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ನಿಮ್ಮ ಮಗಳನ್ನು ಮದವೆ ಮಾಡಿಕೊಡಿ ಎಂದು ರಾಮು ಮತ್ತು ಆತನ ಪೋಷಕರು ಕೇಳಲು ಬಂದಿದ್ದರು. ಆದರೆ ನಾವು ಕೊಡಲ್ಲ ಅಂತ ಹೇಳಿ ಕಳಿಸಿದ್ವಿ. ಕೊಡಲ್ಲ ಅಂದಿದ್ದಕ್ಕೆ ನನ್ನ ಮಗಳನ್ನ ಅಪರಣ ಮಾಡಿದ್ದಾರೆ ಎಂದು ಅರ್ಪಿತಾ ತಾಯಿ ಆರೋಪ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಹಾಸನ ಎಸ್​ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಪತ್ತೆಗಾಗಿ ಮೂರು ತಂಡ ರಚನೆ ಮಾಡಲಾಗಿದೆ. ಸಂಬಂಧಿ ರಾಮು ಅಪಹರಣ ಮಾಡಿದ್ದಾನೆ ಎಂದು ಅರ್ಪಿತಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ ಎಂದು ಎಸ್ಪಿ ಮೊಹಮ್ಮದ್ ಸುಜೀತಾ ಹೇಳಿದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 10:32 am, Thu, 30 November 23