AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!

100 ರೂಪಾಯಿಗಾಗಿ ದುರುಳರು ಸ್ನೇಹಿತನನ್ನೇ ಇರಿದು ಕೊಂದ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಲೀ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದೇ ಗಣೇಶ್ (27) ಜೀವಕ್ಕೆ ಕುತ್ತು ತಂದೊಡ್ಡಿದೆ. ಮದ್ಯಪಾನದ ಅಮಲಿನಲ್ಲಿದ್ದ ದುರುಳರು ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!
ಗಣೇಶ್
ಮಂಜುನಾಥ ಕೆಬಿ
| Updated By: Ganapathi Sharma|

Updated on: Sep 14, 2024 | 5:32 PM

Share

ಹಾಸನ, ಸೆಪ್ಟೆಂಬರ್ 14: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಗಣೇಶ್ (27) ಎಂಬವರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ. ಕೇವಲ 100 ರೂಪಾಯಿ ಕೊಟ್ಟಿಲ್ಲವೆಂಬ ಕಾರಣಕ್ಕೆ ಮದ್ಯಪಾನದ ಅಮಲಿನಲ್ಲಿ ಸ್ನೇಹಿತರೇ ಆತನನ್ನು ಹತ್ಯೆ ಮಾಡಿರುವುದು ಗ್ರಾಮಸ್ಥರನ್ನು ದಂಗುಬಡಿಸಿದೆ.

ಗಣೇಶ್ ಗ್ರಾಮ ಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ. ಹೇಳಿ ಕೇಳಿ ಬೆಳಿಗ್ಗೆಯೇ ಕೊಳಾಯಿಗೆ ನೀರು ಬಿಡುವ ಕೆಲಸ ಮುಗಿಯುತ್ತಿದ್ದರಿಂದ ಸಂಜೆಯಾಗುತ್ತಲೇ ಸ್ನೇಹಿತರ ಜೊತೆ ಸೇರುವ ಅಭ್ಯಾಸ ಇರಿಸಿಕೊಂಡಿದ್ದ. ಶುಕ್ರವಾರ ಕೂಡ ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದ. ಪಾರ್ಟಿಯೆಲ್ಲ ಮಗಿದ ಬಳಿಕ ಗಣೇಶ್​​ನ ಗೆಳೆಯ ರಘು ನೂರು ರೂಪಾಯಿ ಹಣ ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉತ್ತರಿಸಿದ್ದ ಗಣೇಶ್, ‘‘ಪದೇ ಪದೆ ಹಣ ಯಾಕೆ ಕೇಳುತ್ತೀಯಾ? ನನ್ ಹತ್ರ ದುಡ್ಡಿಲ್ಲ ಹೋಗು’’ ಎಂದು ಹೇಳಿದ್ದಕ್ಕೆ ಸಿಟ್ಟಾಗಿದ್ದ ರಘು ತನ್ನ ನಟೋರಿಯಸ್ ಗೆಳೆಯ ಮಧು ಎಂಬುವವನಿಗೆ ವಿಚಾರ ತಿಳಿಸಿದ್ದ. ಮೊದಲೇ ಕುಡಿದ ಅಮಲಿನಲ್ಲಿದ್ದ ಮಧು ಏಕಾಏಕಿ ಗಣೇಶ್ ಮೇಲೆ ಎಗರಿಬಿದ್ದಿದ್ದಾನೆ. ನನ್ನ ದೋಸ್ತನಿಗೆ ಹಣ ಕೊಡುವುದಿಲ್ಲ ಎನ್ನುತ್ತೀಯಾ ಎಂದು ಹಲ್ಲೆ ಮಾಡಲು ಮುಂದಾಗಿದ್ದಾನೆ. ಗಣೇಶ್ ತಪ್ಪಿಸಿಕೊಂಡು ಓಡಲು ಯತ್ನಿಸಿದರೂ ಬಿಡದೆ ಹಿಂಬಾಲಿಸಿ ಬಂದ ಪಾಪಿಗಳು ಇರಿದು ಕೊಂದು ಪರಾರಿಯಾಗಿದ್ದಾರೆ.

ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದಲ್ಲಿ ನಡೆದಿದ್ದೇನು?

ಗಣೇಶ್ ಹಾಗೂ ಆತನ ಸ್ನೇಹಿತರೆಲ್ಲ ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದ ಹೊಟೆಲ್ ಒಂದರಲ್ಲಿ ಜೊತೆಯಾಗಿಯೇ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮಾಡಿ ಮುಗಿಸಿ ರಾತ್ರಿಯಾಗುತ್ತಲೇ ಅಲ್ಲಿಂದ ಹೊರಟಿದ್ದಾರೆ. ಹೊರಗೆಬಂದಾಗ ರಘು ಗಶೇಶ್ ಬಳಿ 100 ರೂಪಾಯಿ ಕೇಳಿದ್ದಾನೆ. ಪದೇ ಪದೆ ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಸಿಟ್ಟಾದ ರಘು ಜಗಳ ಶುರು ಮಾಡಿದ್ದಾನೆ. ರಘು ಜೊತೆಗೆ ಇದ್ದ ಮತ್ತೋರ್ವ ಗೆಳೆಯ ರೌಡಿ ಶೀಟರ್ ಮಧು, ಗಣೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಗಣೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ ಹಿಂಬಾಲಿಸಿ ಓಡಿದ ದುರುಳರು ಅಟ್ಟಾಡಿಸಿದ್ದಾರೆ.

ರಸ್ತೆ ಬದಿಯಲ್ಲೇ ನಡೆಯಿತು ಹತ್ಯೆ

ಗಣೇಶ್​​ನನ್ನು ಅಟ್ಟಾಡಿಸಿಕೊಂಡು ಹೋದ ರಘು ಮತ್ತು ಮಧು ರಸ್ತೆ ಬದಿಯಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಮನೆ ಮಗನನ್ನು ಕಳೆದುಕೊಂಡ ಹೆತ್ತವರ ರೋದನ ಮುಗಿಲು ಮುಟ್ಟಿದ್ದು ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ

ಬೇಲೂರು ತಾಲ್ಲೂಕಿನ ಕುಂಬಾರಹಳ್ಳಿ ಗಣೇಶ್ ಕಳೆದ ಒಂದು ವರ್ಷದಿಂದ ಚೀಕನಹಳ್ಳಿಯ ಗ್ರಾಮಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದ, ಬೆಳಿಗ್ಗೆ ಐದು ಗಂಟೆಗೆಲ್ಲಾ ಎದ್ದು ಬೇಗನೆ ಕೆಲಸ ಮುಗಿಸಿದರೆ ಬಹುತೇಕ ಸಮಯ ಹಾಯಾಗಿ ಇರುತ್ತಿದ್ದ. ಸ್ನೇಹಿತರ ಜೊತೆ ಬೆರೆಯುತ್ತಿದ್ದ. ಚೀಕನಹಳ್ಳಿಯ ಆಟೋ ನಿಲ್ದಾಣದ ಬಳಿ ಇರ್ತಿದ್ದ ರಘು ಜೊತೆಗೆ ಗಳೆತನ ಹೊಂದಿದ್ದ ಗಣೇಶ್ ಆಗಾಗ ಗೆಳೆಯರ ಜೊತೆ ಸೇರಿ ಪಾರ್ಟಿ ಮಾಡುತ್ತಿದ್ದ. ಶುಕ್ರವಾರ ಸಂಜೆ ಕೂಡ ಅದೇ ನಡೆದಿದೆ. ಆದರೆ, ನಂತರ ನಡೆದಿದ್ದೇ ದುರಂತ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಹಾಸನ ಎಸ್​ಪಿ ಮೊಹಮದ್ ಸುಜೀತಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!