ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!

100 ರೂಪಾಯಿಗಾಗಿ ದುರುಳರು ಸ್ನೇಹಿತನನ್ನೇ ಇರಿದು ಕೊಂದ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಲೀ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದೇ ಗಣೇಶ್ (27) ಜೀವಕ್ಕೆ ಕುತ್ತು ತಂದೊಡ್ಡಿದೆ. ಮದ್ಯಪಾನದ ಅಮಲಿನಲ್ಲಿದ್ದ ದುರುಳರು ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!
ಗಣೇಶ್
Follow us
| Updated By: ಗಣಪತಿ ಶರ್ಮ

Updated on: Sep 14, 2024 | 5:32 PM

ಹಾಸನ, ಸೆಪ್ಟೆಂಬರ್ 14: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಗಣೇಶ್ (27) ಎಂಬವರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ. ಕೇವಲ 100 ರೂಪಾಯಿ ಕೊಟ್ಟಿಲ್ಲವೆಂಬ ಕಾರಣಕ್ಕೆ ಮದ್ಯಪಾನದ ಅಮಲಿನಲ್ಲಿ ಸ್ನೇಹಿತರೇ ಆತನನ್ನು ಹತ್ಯೆ ಮಾಡಿರುವುದು ಗ್ರಾಮಸ್ಥರನ್ನು ದಂಗುಬಡಿಸಿದೆ.

ಗಣೇಶ್ ಗ್ರಾಮ ಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ. ಹೇಳಿ ಕೇಳಿ ಬೆಳಿಗ್ಗೆಯೇ ಕೊಳಾಯಿಗೆ ನೀರು ಬಿಡುವ ಕೆಲಸ ಮುಗಿಯುತ್ತಿದ್ದರಿಂದ ಸಂಜೆಯಾಗುತ್ತಲೇ ಸ್ನೇಹಿತರ ಜೊತೆ ಸೇರುವ ಅಭ್ಯಾಸ ಇರಿಸಿಕೊಂಡಿದ್ದ. ಶುಕ್ರವಾರ ಕೂಡ ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದ. ಪಾರ್ಟಿಯೆಲ್ಲ ಮಗಿದ ಬಳಿಕ ಗಣೇಶ್​​ನ ಗೆಳೆಯ ರಘು ನೂರು ರೂಪಾಯಿ ಹಣ ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉತ್ತರಿಸಿದ್ದ ಗಣೇಶ್, ‘‘ಪದೇ ಪದೆ ಹಣ ಯಾಕೆ ಕೇಳುತ್ತೀಯಾ? ನನ್ ಹತ್ರ ದುಡ್ಡಿಲ್ಲ ಹೋಗು’’ ಎಂದು ಹೇಳಿದ್ದಕ್ಕೆ ಸಿಟ್ಟಾಗಿದ್ದ ರಘು ತನ್ನ ನಟೋರಿಯಸ್ ಗೆಳೆಯ ಮಧು ಎಂಬುವವನಿಗೆ ವಿಚಾರ ತಿಳಿಸಿದ್ದ. ಮೊದಲೇ ಕುಡಿದ ಅಮಲಿನಲ್ಲಿದ್ದ ಮಧು ಏಕಾಏಕಿ ಗಣೇಶ್ ಮೇಲೆ ಎಗರಿಬಿದ್ದಿದ್ದಾನೆ. ನನ್ನ ದೋಸ್ತನಿಗೆ ಹಣ ಕೊಡುವುದಿಲ್ಲ ಎನ್ನುತ್ತೀಯಾ ಎಂದು ಹಲ್ಲೆ ಮಾಡಲು ಮುಂದಾಗಿದ್ದಾನೆ. ಗಣೇಶ್ ತಪ್ಪಿಸಿಕೊಂಡು ಓಡಲು ಯತ್ನಿಸಿದರೂ ಬಿಡದೆ ಹಿಂಬಾಲಿಸಿ ಬಂದ ಪಾಪಿಗಳು ಇರಿದು ಕೊಂದು ಪರಾರಿಯಾಗಿದ್ದಾರೆ.

ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದಲ್ಲಿ ನಡೆದಿದ್ದೇನು?

ಗಣೇಶ್ ಹಾಗೂ ಆತನ ಸ್ನೇಹಿತರೆಲ್ಲ ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದ ಹೊಟೆಲ್ ಒಂದರಲ್ಲಿ ಜೊತೆಯಾಗಿಯೇ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮಾಡಿ ಮುಗಿಸಿ ರಾತ್ರಿಯಾಗುತ್ತಲೇ ಅಲ್ಲಿಂದ ಹೊರಟಿದ್ದಾರೆ. ಹೊರಗೆಬಂದಾಗ ರಘು ಗಶೇಶ್ ಬಳಿ 100 ರೂಪಾಯಿ ಕೇಳಿದ್ದಾನೆ. ಪದೇ ಪದೆ ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಸಿಟ್ಟಾದ ರಘು ಜಗಳ ಶುರು ಮಾಡಿದ್ದಾನೆ. ರಘು ಜೊತೆಗೆ ಇದ್ದ ಮತ್ತೋರ್ವ ಗೆಳೆಯ ರೌಡಿ ಶೀಟರ್ ಮಧು, ಗಣೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಗಣೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ ಹಿಂಬಾಲಿಸಿ ಓಡಿದ ದುರುಳರು ಅಟ್ಟಾಡಿಸಿದ್ದಾರೆ.

ರಸ್ತೆ ಬದಿಯಲ್ಲೇ ನಡೆಯಿತು ಹತ್ಯೆ

ಗಣೇಶ್​​ನನ್ನು ಅಟ್ಟಾಡಿಸಿಕೊಂಡು ಹೋದ ರಘು ಮತ್ತು ಮಧು ರಸ್ತೆ ಬದಿಯಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಮನೆ ಮಗನನ್ನು ಕಳೆದುಕೊಂಡ ಹೆತ್ತವರ ರೋದನ ಮುಗಿಲು ಮುಟ್ಟಿದ್ದು ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ

ಬೇಲೂರು ತಾಲ್ಲೂಕಿನ ಕುಂಬಾರಹಳ್ಳಿ ಗಣೇಶ್ ಕಳೆದ ಒಂದು ವರ್ಷದಿಂದ ಚೀಕನಹಳ್ಳಿಯ ಗ್ರಾಮಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದ, ಬೆಳಿಗ್ಗೆ ಐದು ಗಂಟೆಗೆಲ್ಲಾ ಎದ್ದು ಬೇಗನೆ ಕೆಲಸ ಮುಗಿಸಿದರೆ ಬಹುತೇಕ ಸಮಯ ಹಾಯಾಗಿ ಇರುತ್ತಿದ್ದ. ಸ್ನೇಹಿತರ ಜೊತೆ ಬೆರೆಯುತ್ತಿದ್ದ. ಚೀಕನಹಳ್ಳಿಯ ಆಟೋ ನಿಲ್ದಾಣದ ಬಳಿ ಇರ್ತಿದ್ದ ರಘು ಜೊತೆಗೆ ಗಳೆತನ ಹೊಂದಿದ್ದ ಗಣೇಶ್ ಆಗಾಗ ಗೆಳೆಯರ ಜೊತೆ ಸೇರಿ ಪಾರ್ಟಿ ಮಾಡುತ್ತಿದ್ದ. ಶುಕ್ರವಾರ ಸಂಜೆ ಕೂಡ ಅದೇ ನಡೆದಿದೆ. ಆದರೆ, ನಂತರ ನಡೆದಿದ್ದೇ ದುರಂತ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಹಾಸನ ಎಸ್​ಪಿ ಮೊಹಮದ್ ಸುಜೀತಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು