AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್​ಗೆ ಜೈಲುಶಿಕ್ಷೆ: ತಂದೆ, ಮಕ್ಕಳು 2 ವರ್ಷ ಜೈಲುಪಾಲು

50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.

ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್​ಗೆ ಜೈಲುಶಿಕ್ಷೆ: ತಂದೆ, ಮಕ್ಕಳು 2 ವರ್ಷ ಜೈಲುಪಾಲು
ಬಿಜೆಪಿ ಶಾಸಕ ನೆಹರು ಓಲೆಕಾರ್‌Image Credit source: varthabharati.in
TV9 Web
| Edited By: |

Updated on:Feb 13, 2023 | 8:12 PM

Share

ಬೆಂಗಳೂರು: 50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ (Nehru olekar) ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ವಿರುದ್ಧ ಸ್ವಜನ ಪಕ್ಷಪಾತ ಆರೋಪಿಸಿದೆ.  ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಜಾಮೀನು ಮಂಜೂರು ಮಾಡಲಾಗುತ್ತದೆ.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಶಿಕ್ಷೆ

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಶಿಕ್ಷೆ ವಿಧಿಸಲಾಗಿದೆ. ಒಟ್ಟು 8 ಕೇಸ್​ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್​ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಶೇಷ ಕೋರ್ಟ್​ನಿಂದ ಶಿಕ್ಷೆ

ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ

ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಮಾಜಿ ಶಾಸಕ ಎಸ್​. ಮುನಿರಾಜ್​ ನಿನ್ನೆ ಆರೋಪಿಸಿದ್ದರು. ಸದ್ಯ ಈ ವಿಚಾರವಾಗಿ ತಮ್ಮ ವಿರುದ್ಧದ ಆರೋಪಕ್ಕೆ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್‌ ಶಾಸಕ R.ಮಂಜುನಾಥ್‌ (R Manjunath) ಸ್ಪಷ್ಟನೆ ನೀಡಿದ್ದಾರೆ. ಇಂದು (ಫೆ. 12) ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ದಾಸರಹಳ್ಳಿ ಕ್ಷೇತ್ರದಲ್ಲಿ ಅಷ್ಟು ದೊಡ್ಡ ಮೊತ್ತದ ಕಾಮಗಾರಿಗಳೇ ನಡೆದಿಲ್ಲ. ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕ್ಷೇತ್ರದ ಕಾಮಗಾರಿ ಸಂಬಂಧ ಬಾಕಿ ಹಣವನ್ನೇ ಸರ್ಕಾರ ರಿಲೀಸ್ ಮಾಡ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: HDK ಸಿಎಂ ಆಗಿದ್ದಾಗ ದಾಸರಹಳ್ಳಿಗೆ 30 ಕೋಟಿ ರೂ. ಅನುದಾನ, ಶಾಸಕರು ಪರ್ಸೆಂಟೇಜ್​ ತೆಗೆದುಕೊಂಡು ಬಿಲ್‌ ಮಾಡಿರುವ ಆರೋಪ

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 pm, Mon, 13 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?