AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವು

Haveri News: ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ.

ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವು
ಮೃತ ಹೆಡ್​ಕಾನ್ಸ್​ಟೇಬಲ್​ ಬಸಪ್ಪ ಮಲ್ಲಾಡದ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 06, 2023 | 6:03 PM

Share

ಹಾವೇರಿ, ಆಗಸ್ಟ್​ 06: ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್ (Head constable)​ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ. ರಟ್ಟೀಹಳ್ಳಿ ಪೊಲೀಸ್​ ಠಾಣೆ ಬಸಪ್ಪ ಮಲ್ಲಾಡದ(48) ಮೃತ ಹೆಡ್​ಕಾನ್ಸ್​ಟೇಬಲ್​. ಮೂಲತಃ ರಾಣೆಬೆನ್ನೂರು ತಾಲ್ಲೂಕಿನ ಹಾರೋಗೊಪ್ಪ ನಿವಾಸಿ. 26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಬಲಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೋಲಾರ ‌ಜಿಲ್ಲೆ ಕೆಜಿಎಫ್ ಮೂಲದ ಯಶ್ವಂತ್(27) ಮೃತ ಯುವಕ. ನಾಲ್ವರು ಸ್ನೇಹಿತರ ಜೊತೆ ಪಿಕ್ನಿಕ್​ಗೆ ಬಂದಿದ್ದ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ. ಕೆಆರ್​ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಮರದ ಕೊಂಬೆ ಕಡಿಯುವಾಗ ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವು

ಚಿಕ್ಕಮಗಳೂರು: ಮರದ ಕೊಂಬೆ ಕಡಿಯುವಾಗ ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪಗೌಡ(56) ಮೃತ ವ್ಯಕ್ತಿ.  ವಿದ್ಯುತ್ ತಂತಿಗೆ ತಗುಲುತ್ತಿದ್ದ ಕೊಂಬೆ ಕಡಿಯುತ್ತಿದ್ದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಮನೆಗಳ್ಳರ ಬಂಧನ

ಜಮೀನಿನ ರಸ್ತೆ ವಿವಾದ: ಸೈಜುಗಲ್ಲು ಎತ್ತಿಹಾಕಿ ಮಹಿಳೆ ಕೊಲೆಗೆ ಯತ್ನ

ತುಮಕೂರು: ಜಮೀನಿನ ರಸ್ತೆ ವಿವಾದ, ಸೈಜುಗಲ್ಲು ಎತ್ತಿಹಾಕಿ ಮಹಿಳೆ ಕೊಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮಮ್ಮನಹಳ್ಳಿಯಲ್ಲಿ ನಡೆದಿದೆ. ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ಸುಬ್ಬಯ್ಯ ಎಂಬುವವರಿಂದ ಕೃತ್ಯವೆಸಗಲಾಗಿದೆ. ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಕಲ್ಲು ಹಾಕಿ ಬಂದ್‌ ಮಾಡಿದ್ದ.

ಜಮೀನಿಗೆ ತೆರಳಲು ದಾರಿ ಬಿಡುವಂತೆ ಕೇಳಿದ್ದಕ್ಕೆ ಅಕ್ಕಮ್ಮ ಹತ್ಯೆಗೆ ಯತ್ನಿಸಲಾಗಿದೆ. ಸೈಜುಗಲ್ಲು ಎತ್ತಿಹಾಕಿದರೂ ಅದೃಷ್ಟವಶಾತ್ ಬಚಾವ್​ ಆಗಿದ್ದಾರೆ. ಸೊಂಟ, ಕಾಲಿಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು