AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವೆಡೆ ನಿನ್ನೆ ರಾತ್ರಿ ಸುರಿದ ಭಾರೀ ಮಳಯಿಂದ ಜನ ಜೀವನ ಅಸ್ಥವ್ಯಸ್ಥ; ಸಿಡಿಲು ಬಡಿದು ಕರು ಸಾವು

ನಿನ್ನೆ ರಾತ್ರಿ ವೇಳೆ ಮಳೆ ಸುರಿಯುತ್ತಿದ್ದಾಗ ಸಿಡಿಲು ಬಡಿದು ಎರಡು ಹಸು ಹಾಗೂ ಒಂದು ಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಹಾಪುರ‌ ತಾಲೂಕಿನ ಗುಂಡಳ್ಳಿ ತಾಂಡದಲ್ಲಿ ನಡೆದಿದೆ.

ಹಲವೆಡೆ ನಿನ್ನೆ ರಾತ್ರಿ ಸುರಿದ ಭಾರೀ ಮಳಯಿಂದ ಜನ ಜೀವನ ಅಸ್ಥವ್ಯಸ್ಥ; ಸಿಡಿಲು ಬಡಿದು ಕರು ಸಾವು
ಸಿಡಿಲು ಬಡಿದು ಎರಡು ಹಸು ಹಾಗೂ ಒಂದು ಕರು ಸಾವು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 22, 2022 | 4:43 PM

Share

ದಾವಣಗೆರೆ: ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರೀ ಮಳೆ (Heavy Rain) ಯಿಂದ ಜನ ಜೀವನ ಅಸ್ಥವ್ಯಸ್ಥವಾಗಿದ್ದು, ಮಳೆಯ ರಭಸಕ್ಕೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಳೆಯ ಹೊಡೆತಕ್ಕೆ ಜನ ಕಂಗಾಲಾಗಿದ್ದಾರೆ. ನೀರು ಹರಿಯುವಿಕೆ ನಡುವೆ ಕೆಲ ಜನರ ಹುಚ್ಚು ಸಹಾಸ ಮಾಡುತ್ತಿದ್ದಾರೆ. ಶಾಲಾ ವಾಹನ ಹಾಗೂ ಬೈಕ್ ಚಲಾಯಿಸುವ ಹುಚ್ಚು ಸಾಹಸಕ್ಕೆ ಜ‌ನ ಮುಂದಾಗಿದ್ದಾರೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. 15KM ಸುತ್ತಾಡಿಕೊಂಡು ಪರ್ಯಾಯ ಮಾರ್ಗದಿಂದ ಜನರ ಪ್ರಯಾಣ ಮಾಡುವಂತ್ತಾಗಿದೆ. ಹತ್ತಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಚಾರ ಸ್ಥಗಿತವಾಗಿದ್ದು, ಗ್ರಾಮಕ್ಕೊಂದು ಸೇತುವೆ ನಿರ್ಮಿಸಿ ಎಂದು ಜನರು ದುಂಬಾಲು ಬಿದಿದ್ದಾರೆ. ಸಾಕಷ್ಟು ಬಾರಿ ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು, ಜನರ ಮನವಿಗೆ ಶಾಸಕರ ಡೊಂಟ್ ಕೇರ್ ಎಂದಿದ್ದಾರೆ. ಶಾಸಕರ ವರ್ತನೆಯಿಂದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

ಬಿರುಗಾಳಿ ಸಹಿತ ಮಳೆ ಹಿನ್ನೆಲೆ ಬಾಳೆ ಬೆಳೆ ನಾಶ:

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ 2 ದಿನದಿಂದ ಬಿರುಗಾಳಿ ಸಹಿತ ಮಳೆ ಹಿನ್ನೆಲೆ ಹಿರಿಯೂರು ಸೇರಿ ವಿವಿದೆಡೆ ಬಾಳೆ ಬೆಳೆ ಹಾನಿಯಾಗಿದೆ. ಬಬ್ಬೂರು ಗ್ರಾಮದ ಬಳಿ ಯಶೋಧರ ಎಂಬುವವರಿಗೆ ಸೇರಿದ್ದ ಸುಮಾರು ನಾಲ್ಕು ಎಕರೆಯಷ್ಟು ಬಾಳೆ ಬೆಳೆ ಹಾನಿಯಾಗಿದೆ. ಬಿರುಗಾಳಿಗೆ ಜಿಲ್ಲೆಯಲ್ಲಿ 44ಹೆಕ್ಟೇರ್ ಬಾಳೆ ಬೆಳೆ ಹಾನಿಯಾಗಿದೆ.

ಬೃಹತ್ ಗಾತ್ರದ ಮರ ಬಿದ್ದು ಐತಿಹಾಸಿಕ ದೇವಸ್ಥಾನ ಧ್ವಂಸ;

ಕೊಡಗು: ಬೃಹತ್ ಗಾತ್ರದ ಮರ ಬಿದ್ದು ಐತಿಹಾಸಿಕ ದೇವಸ್ಥಾನ ಧ್ವಂಸವಾಗಿರುವಂತಹ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅರಮೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪನ್ನಂಗಾಲತ್ತಮ್ಮೆ ದೇವಸ್ಥಾನದ ಮೇಲೆ ಬಿದ್ದ ಭಾರೀ ಮರ ಬಿದಿದ್ದು, ದೇವಸ್ಥಾನದ ಗರ್ಭಗುಡಿಗೆ ಗಂಭೀರ ಹಾನಿಯಾಗಿದೆ. ಮಳೆ ಗಾಳಿ ಇಲ್ಲದೇ ಇದ್ದರೂ ಹಸಿ ಮರ ಉರುಳಿ ಬಿದ್ದಿದೆ. ಪ್ರಕೃತಿಯ ಆಟಕ್ಕೆ ಗ್ರಾಮಸ್ಥರು ಬೆಚ್ಚಿಬಿದಿದ್ದಾರೆ.

ಸಿಡಿಲು ಬಡಿದು ಎರಡು ಹಸು ಹಾಗೂ ಒಂದು ಕರು ಸಾವು:

ಯಾದಗಿರಿ: ನಿನ್ನೆ ರಾತ್ರಿ ವೇಳೆ ಮಳೆ ಸುರಿಯುತ್ತಿದ್ದಾಗ ಸಿಡಿಲು ಬಡಿದು ಎರಡು ಹಸು ಹಾಗೂ ಒಂದು ಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಹಾಪುರ‌ ತಾಲೂಕಿನ ಗುಂಡಳ್ಳಿ ತಾಂಡದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆ ಮುಂದೆ ಕಟ್ಟಿದಾಗ ಘಟನೆ ಸಂಭವಿಸಿದ್ದು, ಶಾಂತಿಬಾಯಿ ಎಂಬ ರೈತ ಮಹಿಳೆಗೆ ಹಸುಗಳು ಸೇರಿವೆ. ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ;

ಸರಕಾರ ಪೊಲೀಸರ ಮೂಲಕ ನನ್ನ ಹೆದರಿಸುವ ತಂತ್ರ ಮಾಡ್ತಿದೆ; ನನ್ನ ಕಟ್ಟಿಹಾಕುವ ಪ್ರಯತ್ನ ಮಾಡಲಾಗ್ತಿದೆ – ದಿಂಗಾಲೇಶ್ವರ ಶ್ರೀ

ತಮಿಳುನಾಡಿಗೆ ಹೊರಟಿದ್ದೀರಾ?; ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ತೆರಬೇಕಾದೀತು ಎಚ್ಚರ!

Published On - 4:28 pm, Fri, 22 April 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್