AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಶ್ಯೂರಿಟಿ ಬಾಂಡ್ ಪಡೆದು ತಕ್ಷಣ ಬಿಡುಗಡೆ ಮಾಡಿ: ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೂಚನೆ

ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ವಿನಾಕಾರಣ ಠಾಣೆಯ ಮುಂದೆ ನಿಲ್ಲಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಹಲವು ವರ್ಷಗಳ ಕಾಲ ಠಾಣೆಯ ಮುಂದೆ ನಿಲ್ಲುವ ವಾಹನಗಳು ನಿಧಾನವಾಗಿ ಹಾಳಾಗುತ್ತವೆ. ದಿನ ಕಳೆದಂತೆ ಅವುಗಳನ್ನು ಗುರುತಿಸುವುದಕ್ಕೂ ಸಾಧ್ಯವಾಗದು - ಹೈಕೋರ್ಟ್

ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಶ್ಯೂರಿಟಿ ಬಾಂಡ್ ಪಡೆದು ತಕ್ಷಣ ಬಿಡುಗಡೆ ಮಾಡಿ: ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೂಚನೆ
ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಶ್ಯೂರಿಟಿ ಬಾಂಡ್ ಪಡೆದು ತಕ್ಷಣ ಬಿಡುಗಡೆ ಮಾಡಿ
TV9 Web
| Updated By: ಸಾಧು ಶ್ರೀನಾಥ್​|

Updated on: Nov 11, 2022 | 1:15 PM

Share

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ  ವಶಪಡಿಸಿಕೊಂಡ ವಾಹನಗಳನ್ನು (Seized vehicles) ಅನಗತ್ಯವಾಗಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳಬೇಡಿ. ಬದಲಿಗೆ ಶ್ಯೂರಿಟಿ ಪಡೆದು ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಸೂಚಿಸಿದೆ. ವಾಹನ ಬಿಡುಗಡೆ ಮಾಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಜವ್ವಾಜಿ ಧನತೇಜ (Javvaji Dhana Theja) ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ (Justice K.Natarajan) ಅವರಿದ್ದ ಪೀಠ (High Court of Karnataka) ಈ ನಿರ್ದೇಶನ ನೀಡಿದೆ.

ಪೀಠ ತನ್ನ ಆದೇಶದಲ್ಲಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ವಾಹನಗಳನ್ನು ವಿನಾಕಾರಣ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಹಲವು ವರ್ಷಗಳ ಕಾಲ ಠಾಣೆಯ ಮುಂದೆ ನಿಲ್ಲುವ ವಾಹನಗಳು ನಿಧಾನವಾಗಿ ಹಾಳಾಗುತ್ತವೆ. ದಿನ ಕಳೆದಂತೆ ಅವುಗಳನ್ನು ಗುರುತಿಸುವುದಕ್ಕೂ ಸಾಧ್ಯವಾಗದು ಮತ್ತು ನ್ಯಾಯಾಲಯಕ್ಕೆ ತರಲಿಕ್ಕೂ ಆಗದ ಸ್ಥಿತಿ ತಲುಪುತ್ತವೆ.

ಆದ್ದರಿಂದ ಸುಪ್ರೀಂ ಕೋರ್ಟ್ ಸುಂದರ್ ಬಾಯ್ ಅಂಬಲಾಲ್ ವರ್ಸಸ್ ಗುಜರಾತ್ ಸರ್ಕಾರ ಪ್ರಕರಣದಲ್ಲಿ ನೀಡಿರುವ ನಿರ್ದೇಶನಗಳ ಅನ್ವಯ ವಾಹನಗಳನ್ನು ಅವುಗಳ ಮಾಲಿಕರಿಗೆ ಬಾಂಡ್ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಷರತ್ತುಗಳನ್ನು ವಿಧಿಸುವ ಮೂಲಕ ಹಿಂದಿರುಗಿಸಬೇಕು. ಅಲ್ಲದೇ, ವಾಹನ ಬಿಡುಗಡೆಗೂ ಮುನ್ನ ಪಂಚರ ಸಮಕ್ಷಮದಲ್ಲಿ ವಿವಿಧ ಕೋನಗಳಲ್ಲಿ ವಾಹನದ ಫೋಟೋಗಳನ್ನು ಚಿತ್ರಿಸಿಕೊಳ್ಳಬೇಕು. ಈ ಫೋಟೋಗಳನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಡಾ ಸಿಟಿ ಕಾರು, ಬೈಕ್ ಹಾಗೂ ಆಟೋ ವಶಕ್ಕೆ ಪಡೆದಿದ್ದರು. ಈ ವಾಹನಗಳ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಮಾನ್ಯ ಮಾಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ವಾಹನಗಳ ಮಾಲಿಕರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಸ್ತುತ ಪ್ರಕರಣದಲ್ಲಿ ವಾಹನಗಳ ಮಾಲಿಕರು ಅಪರಾಧಿಗಳಲ್ಲ. ವಾಹನಗಳನ್ನಷ್ಟೇ ಅಪರಾಧ ಪ್ರಕರಣದಲ್ಲಿ ಬಳಸಿರುವ ಆರೋಪವಿದೆ. ಹೀಗಾಗಿ ವಾಹನಗಳ ಬಿಡುಗಡೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸದೇ ಇರುವುದು ಸರಿ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅಲ್ಲದೇ, ಹೋಂಡಾ ಸಿಟಿ ಕಾರಿಗೆ 3 ಲಕ್ಷ, ಹೋಂಡಾ ಡಿಯೋ ಬೈಕ್ ಗೆ 30 ಸಾವಿರ ಹಾಗೂ ಆಟೋ ರಿಕ್ಷಾಗೆ 75 ಸಾವಿರ ರೂಪಾಯಿ ಮೊತ್ತದ ಬಾಂಡ್ ಪಡೆದು (indemnity bonds with surety) ವಾಹನಗಳನ್ನು ಅವುಗಳ ಮಾಲಿಕರಿಗೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದೆ. (ಮೂಲ: lawtime.in)

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್