AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಮುಂದುವರಿದ ಹಿಂದೂ ಮುಸ್ಲಿಂ ಸಂಘರ್ಷ: ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ

ಉತ್ತರ ಕನ್ನಡ ಜಿಲ್ಲೆಯ ಕೋಮು ಸ್ಲೂಕ್ಷ್ಮ ಭಟ್ಕಳದಲ್ಲಿ ಹಿಂದೂ ಮುಸ್ಲಿಂ ಸಂಘರ್ಷ ಮುಂದುವರಿದಿದೆ. ಭಟ್ಕಳದ ದೇವಿ ನಗರ ಎಂಬ ಹೆಸರಿನ ನಾಮಫಲಕ ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡದ ಹಿನ್ನಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ಇದರಿಂದ ಕುಪಿತಾರ ಹಿಂದೂ ಕಾರ್ಯಕರ್ತರು, ಅನಧಿಕೃತ ಮಸೀದಿ ತೆರವಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದಕ್ಕೆ ದುಬೈನಿಂದ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಭಟ್ಕಳದಲ್ಲಿ ಮುಂದುವರಿದ ಹಿಂದೂ ಮುಸ್ಲಿಂ ಸಂಘರ್ಷ: ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ
ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ ಹಾಕಿದ ಜಾಲಿ ಗ್ರಾಮದ ಮುಕ್ತಾರ್ ಮಹ್ಮದ್ ಕೊಟ್ಟಿಕೋಡಿ (ಎಡಚಿತ್ರ) ಮತ್ತು ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು (ಬಲಚಿತ್ರ)
ವಿನಾಯಕ ಬಡಿಗೇರ್​
| Edited By: Rakesh Nayak Manchi|

Updated on: Jan 18, 2024 | 6:51 AM

Share

ಕಾರವಾರ, ಜ.18: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೋಮು ಸ್ಲೂಕ್ಷ್ಮ ಭಟ್ಕಳದಲ್ಲಿ (Bhatkal) ಹಿಂದೂ ಮುಸ್ಲಿಂ ಸಂಘರ್ಷ ಮುಂದುವರಿದಿದೆ. ಭಟ್ಕಳದ ದೇವಿ ನಗರ ಎಂಬ ಹೆಸರಿನ ನಾಮಫಲಕ ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡದ ಹಿನ್ನಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ಇದರಿಂದ ಕುಪಿತಾರ ಹಿಂದೂ ಕಾರ್ಯಕರ್ತರು, ಅನಧಿಕೃತ ಮಸೀದಿ ತೆರವಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದಕ್ಕೆ ದುಬೈನಿಂದ (Dubai) ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಭಟ್ಕಳ ತಾಲೂಕಿನ ಜಾಲಿ ಪಟ್ಟಣದಲ್ಲಿ ಹಿಂದೂ ದೇವರ ಹೆಸರಿನಲ್ಲಿ ಇರುವ ದೇವಿ ನಗರ ಎಂಬ ಹೆಸರಿನ ನಾಮಫಲಕವನ್ನು ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ನಾಮಫಲಕ ತೆರವಿಗೆ ವಿರೋಧಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗಲಿದೆ: ಸಂಸದ ಅನಂತಕುಮಾರ್ ಹೆಗಡೆ

ಅಲ್ಲದೆ, ಜಾಲಿ ಪಟ್ಟಣದಲ್ಲಿರುವ ಅನಧಿಕೃತ ಮಸೀದಿ ತೆರವುಗೊಳಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ಹರೀಶ, ದೇಯಾ ಹಾಗೂ ಮಹೇಶ ಎಂಬವರಿಗೆ ದುಬೈನಿಂದ ವಿಡಿಯೋ ಮೂಲಕ ಬೆದರಿಕೆ ಹಾಕಲಾಗಿದೆ. ಭಟ್ಕಳದ ಜಾಲಿಯಲ್ಲಿ ಗುರುಗಳನ್ನು ಮುಟ್ಟಿದರೇ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು ಅವಾಚ್ಯ ಶಬ್ಧದಿಂದ ನಿಂದಿಸಿ ದಮ್ಕಿ ಹಾಕಲಾಗಿದೆ.

ಭಟ್ಕಳದ ಜಾಲಿ ಗ್ರಾಮದ ಮುಕ್ತಾರ್ ಮಹ್ಮದ್ ಕೊಟ್ಟಿಕೋಡಿ ಎಂಬಾತ ದಮ್ಕಿ ಹಾಕಿದ್ದಾಗಿ ಆರೋಪಿಸಿ ಹಿಂದೂ ಕಾರ್ಯಕರ್ತರು ಭಟ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು, ಸೆಕ್ಷನ್ 504, 506, 507 ರ ಅಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinayak Badiger
Vinayak Badiger
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ