AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ಮುರುಗನ್ ಬಂಧನಕ್ಕಾಗಿ ಸಬ್​ ಇನ್ಸ್​​ಪೆಕ್ಟರ್​ ಎಸಕ್ಕಿರಾಜಾ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಲಕ್ಕಾಡ್​ ಬಳಿ ನಮ್ಮ ಪೊಲೀಸರ ತಂಡ ಹೋಗುತ್ತಿದ್ದಂತೆ ಮುರುಗನ್​ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಗುಂಡು ಹಾರಿಸಲಾಯಿತು ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 17, 2022 | 10:23 AM

Share

ತಮಿಳುನಾಡಿನ ದಿಂಡಿಗಲ್​ ಪೊಲೀಸರು (Tamil Nadu Police)ಮಾರ್ಚ್​ 16ರಂದು ನಿರವಿ ಮುರುಗನ್​ ಎಂಬ ರೌಡಿಯನ್ನು ಎನ್​ಕೌಂಟರ್​​​ನಲ್ಲಿ ಹತ್ಯೆ ಮಾಡಿದ್ದಾರೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ನಿರವಿ ಮುರುಗನ್​ ಸುಮಾರು 60 ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಈತ ಸುಮಾರು ಹೇಯ ಕೃತ್ಯಗಳನ್ನೂ ಮಾಡಿದವನು. ತಿರುನಲ್ವೇಲಿ, ಟುಟಿಕೋರಿನ್ ಮತ್ತು ಕನ್ಯಾಕುಮಾರಿ ಜಿಲ್ಲೆಗಳ ಪೊಲೀಸ್​ ಠಾಣೆಗಳಲ್ಲಿ ಮುರುಗನ್ ವಿರುದ್ಧ ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ದಿಂಡಿಗಲ್​​ ಒಡ್ಡಾಣಛತ್ರಂ ಎಂಬಲ್ಲಿದ್ದ ವೈದ್ಯರ ಮನೆಯಲ್ಲಿ ದರೋಡೆಯಾಗಿತ್ತು. ಈ ದರೋಡೆಯಲ್ಲೂ ಮುರಗುನ್ ಭಾಗಿಯಾಗಿದ್ದ. ಅದರಲ್ಲೂ ಈತನ ವಿರುದ್ಧದ ಪ್ರಮುಖ ಕೇಸ್​ ಎಂದರೆ 2004ರಲ್ಲಿ ನಡೆದಿದ್ದ ತಮಿಳುನಾಡಿನ ಮಾಜಿ ಕಾನೂನು ಸಚಿವ ಅಲಾದಿ ಅರುಣಾರ ಹತ್ಯೆ. ಮುರುಗನ್​ ಬರೀ ತಮಿಳುನಾಡಿನಷ್ಟೇ ಅಲ್ಲದೆ, ಕರ್ನಾಟಕ ಸೇರಿ ಇನ್ನೂ ಹಲವು ರಾಜ್ಯಗಳಲ್ಲಿ ಕ್ರೈಂಗಳಲ್ಲಿ ಪಾಲ್ಗೊಂಡಿದ್ದಾನೆ. ಈತ ಕಲಕ್ಕಡ್​ ಬಳಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ಪೊಲೀಸರು ಹೋದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಇದೇ ವೇಳೆ ಪೊಲೀಸರು ಗುಂಡು ಹಾರಿಸಿ ಕೊಂಡಿದ್ದಾರೆ.

ಎನ್​ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತಿರುನಲ್ವೇಲಿ ಪೊಲೀಸ್ ವರಿಷ್ಠಾಧಿಕಾರಿ ಪಿ ಸರವಣನ್, ಮುರುಗನ್ ಬಂಧನಕ್ಕಾಗಿ ಸಬ್​ ಇನ್ಸ್​​ಪೆಕ್ಟರ್​ ಎಸಕ್ಕಿರಾಜಾ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಲಕ್ಕಾಡ್​ ಬಳಿ ನಮ್ಮ ಪೊಲೀಸರ ತಂಡ ಹೋಗುತ್ತಿದ್ದಂತೆ ಮುರುಗನ್​ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಆತ ಕುಡುಗೋಲಿನಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ. ಆಗ ಎಸ್​ಐ ಗುಂಡು ಹಾರಿಸಿದರು ಎಂದು ತಿಳಿಸಿದ್ದಾರೆ.  ಅಂದಹಾಗೇ, ಮುರುಗನ್​ ಹಲ್ಲೆಗೆ ಎಸಕ್ಕಿರಾಜ ಸೇರಿ ಒಟ್ಟು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಎನ್​ಕೌಂಟರ್​ ಪ್ರಕರಣದ ನ್ಯಾಯಾಂಗ ತನಿಖೆಯನ್ನು ನುಂಗುನೇರಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಪ್ರಾರಂಭ ಮಾಡಿಕೊಂಡಿದೆ.

ನಿನ್ನೆ ಅಸ್ಸಾಂನಲ್ಲಿ ಇಬ್ಬರು ರೇಪಿಸ್ಟ್​​ಗಳನ್ನು ಅಲ್ಲಿನ ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿದ್ದರು. 24 ಗಂಟೆಯೊಳಗೆ, ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಅಸ್ಸಾಂ ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ. ಅದರಲ್ಲಿ ಒಬ್ಬಾತ 7 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಂದಿದ್ದವನಾಗಿದ್ದಾರೆ, ಇನ್ನೊಬ್ಬಾತ 16ವರ್ಷದ ಹುಡುಗಿಯ ಸಾಮೂಹಿಕ ಅತ್ಯಾಚಾರದಲ್ಲಿ ಪಾಲ್ಗೊಂಡವನಾಗಿದ್ದ. ಇವರಿಬ್ಬರೂ ಕೂಡ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಗುಂಡೇಟಿಗೆ ಬಲಿಯಾಗಿದ್ದರು.

ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​​: ಅಸ್ಸಾಂನಲ್ಲಿ 24 ಗಂಟೆಯಲ್ಲಿ ಇಬ್ಬರು ರೇಪಿಸ್ಟ್​​ಗಳಿಗೆ ಗುಂಡಿಕ್ಕಿ ಕೊಂದ ಪೊಲೀಸರು

Published On - 9:55 am, Thu, 17 March 22

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?