Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ಮುರುಗನ್ ಬಂಧನಕ್ಕಾಗಿ ಸಬ್​ ಇನ್ಸ್​​ಪೆಕ್ಟರ್​ ಎಸಕ್ಕಿರಾಜಾ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಲಕ್ಕಾಡ್​ ಬಳಿ ನಮ್ಮ ಪೊಲೀಸರ ತಂಡ ಹೋಗುತ್ತಿದ್ದಂತೆ ಮುರುಗನ್​ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಗುಂಡು ಹಾರಿಸಲಾಯಿತು ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 17, 2022 | 10:23 AM

ತಮಿಳುನಾಡಿನ ದಿಂಡಿಗಲ್​ ಪೊಲೀಸರು (Tamil Nadu Police)ಮಾರ್ಚ್​ 16ರಂದು ನಿರವಿ ಮುರುಗನ್​ ಎಂಬ ರೌಡಿಯನ್ನು ಎನ್​ಕೌಂಟರ್​​​ನಲ್ಲಿ ಹತ್ಯೆ ಮಾಡಿದ್ದಾರೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ನಿರವಿ ಮುರುಗನ್​ ಸುಮಾರು 60 ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಈತ ಸುಮಾರು ಹೇಯ ಕೃತ್ಯಗಳನ್ನೂ ಮಾಡಿದವನು. ತಿರುನಲ್ವೇಲಿ, ಟುಟಿಕೋರಿನ್ ಮತ್ತು ಕನ್ಯಾಕುಮಾರಿ ಜಿಲ್ಲೆಗಳ ಪೊಲೀಸ್​ ಠಾಣೆಗಳಲ್ಲಿ ಮುರುಗನ್ ವಿರುದ್ಧ ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ದಿಂಡಿಗಲ್​​ ಒಡ್ಡಾಣಛತ್ರಂ ಎಂಬಲ್ಲಿದ್ದ ವೈದ್ಯರ ಮನೆಯಲ್ಲಿ ದರೋಡೆಯಾಗಿತ್ತು. ಈ ದರೋಡೆಯಲ್ಲೂ ಮುರಗುನ್ ಭಾಗಿಯಾಗಿದ್ದ. ಅದರಲ್ಲೂ ಈತನ ವಿರುದ್ಧದ ಪ್ರಮುಖ ಕೇಸ್​ ಎಂದರೆ 2004ರಲ್ಲಿ ನಡೆದಿದ್ದ ತಮಿಳುನಾಡಿನ ಮಾಜಿ ಕಾನೂನು ಸಚಿವ ಅಲಾದಿ ಅರುಣಾರ ಹತ್ಯೆ. ಮುರುಗನ್​ ಬರೀ ತಮಿಳುನಾಡಿನಷ್ಟೇ ಅಲ್ಲದೆ, ಕರ್ನಾಟಕ ಸೇರಿ ಇನ್ನೂ ಹಲವು ರಾಜ್ಯಗಳಲ್ಲಿ ಕ್ರೈಂಗಳಲ್ಲಿ ಪಾಲ್ಗೊಂಡಿದ್ದಾನೆ. ಈತ ಕಲಕ್ಕಡ್​ ಬಳಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ಪೊಲೀಸರು ಹೋದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಇದೇ ವೇಳೆ ಪೊಲೀಸರು ಗುಂಡು ಹಾರಿಸಿ ಕೊಂಡಿದ್ದಾರೆ.

ಎನ್​ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತಿರುನಲ್ವೇಲಿ ಪೊಲೀಸ್ ವರಿಷ್ಠಾಧಿಕಾರಿ ಪಿ ಸರವಣನ್, ಮುರುಗನ್ ಬಂಧನಕ್ಕಾಗಿ ಸಬ್​ ಇನ್ಸ್​​ಪೆಕ್ಟರ್​ ಎಸಕ್ಕಿರಾಜಾ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಲಕ್ಕಾಡ್​ ಬಳಿ ನಮ್ಮ ಪೊಲೀಸರ ತಂಡ ಹೋಗುತ್ತಿದ್ದಂತೆ ಮುರುಗನ್​ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಆತ ಕುಡುಗೋಲಿನಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ. ಆಗ ಎಸ್​ಐ ಗುಂಡು ಹಾರಿಸಿದರು ಎಂದು ತಿಳಿಸಿದ್ದಾರೆ.  ಅಂದಹಾಗೇ, ಮುರುಗನ್​ ಹಲ್ಲೆಗೆ ಎಸಕ್ಕಿರಾಜ ಸೇರಿ ಒಟ್ಟು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಎನ್​ಕೌಂಟರ್​ ಪ್ರಕರಣದ ನ್ಯಾಯಾಂಗ ತನಿಖೆಯನ್ನು ನುಂಗುನೇರಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಪ್ರಾರಂಭ ಮಾಡಿಕೊಂಡಿದೆ.

ನಿನ್ನೆ ಅಸ್ಸಾಂನಲ್ಲಿ ಇಬ್ಬರು ರೇಪಿಸ್ಟ್​​ಗಳನ್ನು ಅಲ್ಲಿನ ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿದ್ದರು. 24 ಗಂಟೆಯೊಳಗೆ, ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಅಸ್ಸಾಂ ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ. ಅದರಲ್ಲಿ ಒಬ್ಬಾತ 7 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಂದಿದ್ದವನಾಗಿದ್ದಾರೆ, ಇನ್ನೊಬ್ಬಾತ 16ವರ್ಷದ ಹುಡುಗಿಯ ಸಾಮೂಹಿಕ ಅತ್ಯಾಚಾರದಲ್ಲಿ ಪಾಲ್ಗೊಂಡವನಾಗಿದ್ದ. ಇವರಿಬ್ಬರೂ ಕೂಡ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಗುಂಡೇಟಿಗೆ ಬಲಿಯಾಗಿದ್ದರು.

ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​​: ಅಸ್ಸಾಂನಲ್ಲಿ 24 ಗಂಟೆಯಲ್ಲಿ ಇಬ್ಬರು ರೇಪಿಸ್ಟ್​​ಗಳಿಗೆ ಗುಂಡಿಕ್ಕಿ ಕೊಂದ ಪೊಲೀಸರು

Published On - 9:55 am, Thu, 17 March 22

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ