AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

Kempegowda International Airport: ವಿಮಾನದಲ್ಲಿ ಬಾಂಬ್ ಕುರಿತ ಹೇಳಿಕೆ ನೀಡಿ ಆತಂಕ ಸೃಷ್ಟಿಸಿದ್ದು ಅಕ್ಷಮ್ಯ ಅಪರಾಧವಾಗಿದೆ ಮತ್ತು ಇದೀಗ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

Bomb Threat: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ
ಗಣಪತಿ ಶರ್ಮಾ
|

Updated on: Jan 30, 2024 | 9:33 AM

Share

ಬೆಂಗಳೂರು, ಜನವರಿ 30: ಬ್ಯಾಗ್​ನಲ್ಲಿ ಬಾಂಬ್ (Bomb Threat) ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ (Kempegowda International Airport) ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ ಕುಮಾರನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೇಸ್ತು ಬೀಳುವಂತಾಗಿತ್ತು.​​​​

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿದ್ದ ಸಜು ಕುಮಾರ್ (48) ಇನ್ನೇನು ವಿಮಾನ ಟೇಕಾಫ್ ಆಗಬೇಕು ಎನ್ನುವಷ್ಟರಲ್ಲಿ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಈ ಘಟನೆಯು ಭಾನುವಾರ ಸಂಜೆ 5.25 ಕ್ಕೆ ಸಂಭವಿಸಿದೆ. ವಿಮಾನ ಸಂಖ್ಯೆ ‘I5 990’ ರ ನಿರ್ಗಮನಕ್ಕೆ ಕೇವಲ ಐದು ನಿಮಿಷಗಳ ಮೊದಲು ಆರೋಪಿಯು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಏರ್‌ಲೈನ್ ಸಿಬ್ಬಂದಿಗೆ ಬ್ಯಾಗ್ ಪರಿಶೀಲಿಸಲೂ ಅನುವು ಮಾಡಿಕೊಡಲಿಲ್ಲ. ಪರಿಣಾಮವಾಗಿ ತಕ್ಷಣವೇ ಆತನನ್ನು ವಿಮಾದಿಂದ ಇಳಿಸಲಾಯಿತು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದರು.

ಆರೋಪಿ ವಿರುದ್ಧ ಎಫ್​​ಐಆರ್

ಬಳಿಕ ಆರೋಪಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹೇಳಿಕೆಗಳಿಗೆ ಸಂಬಂಧಿಸಿದ್ದಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

ಇದು ಅಕ್ಷಮ್ಯ ಅಪರಾಧವಾಗಿದೆ ಮತ್ತು ಇದೀಗ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಗುರಾಯಿಸಿ ನಿಂದಿಸಿದ ಯುವಕನಿಗೆ ಚಾಕು ಇರಿತ

ಆರೋಪಿ ಕುಮಾರನ್ ಕೇರಳದ ತ್ರಿಶೂರ್‌ಗೆ ಹೋಗಲು ಕೊಚ್ಚಿಗೆ ತೆರಳುವ ವಿಮಾನವೇರಿದ್ದ ಎಂದು ಮೂಲಗಳು ತಿಳಿಸಿವೆ.

ಅಸಲಿಗೆ ವಿಮಾನದಲ್ಲಿ ಆಗಿದ್ದೇನು?

ಆರೋಪಿಯ ಸಹೋದರಿಯ ತಂಗಿಯ ನವಜಾತ ಶಿಶು ಹೆರಿಗೆಯ ಸಮಯದಲ್ಲಿ ಸಾವನ್ನಪ್ಪಿತ್ತು. ಹೀಗಾಗಿ ತರಾತುರಿಯಲ್ಲಿ ಊರಿಗೆ ತೆರಳಲು ಆರೋಪಿ ವಿಮಾನ ಪ್ರಯಾಣ ಆಯ್ಕೆ ಮಾಡಿಕೊಂಡಿದ್ದ. ಭದ್ರತಾ ತಪಾಸಣೆ ಎಲ್ಲ ಮುಗಿದು ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಆತ ಸಿಟ್ಟಾಗಿದ್ದ. ಹೀಗಾಗಿ ತಪಾಸಣೆ ನಡೆಸುತ್ತಿದ್ದ ಸಿಬ್ಬಂದಿ ಬಳಿ, ನಾನೇನು ಬಾಂಬ್ ಅಥವಾ ಚಾಕುವನ್ನು ಹೊತ್ತೊಯ್ಯುತ್ತಿದ್ದೇನೆ ಎಂದು ಶಂಕಿಸಿದ್ದೀರಾ ಎಂದು ಹೇಳಿದ್ದ ಎಂಬುದಾಗಿ ಮೂಲಗಳು ತಿಳಿಸಿವೆ. ನವಜಾತ ಶಿಶುವಿನ ಮರಣವನ್ನು ದೃಢಪಡಿಸಿದ ನಂತರ, ಕುಮಾರನ್ ಕ್ಷಮೆಯಾಚಿಸಿದರೆ ಕೇವಲ ದಂಡದೊಂದಿಗೆ ಆತನನ್ನು ಬಿಟ್ಟುಬಿಡುವ ಸಾಧ್ಯತೆಯೂ ಇದೆ ಎಂದು ಮಾಧ್ಯಮ ವರದಿಯೊಂದು ಉಲ್ಲೇಖಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು