AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ

ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ
ಬಂಧಿತ ಆರೋಪಿಗಳು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: May 22, 2022 | 4:02 PM

Share

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ ಪ್ರಕರಣ ಹಿನ್ನೆಲೆ ಬೆಂಗಳೂರಿನ ನಂದಿನಿ ಲೇಔಟ್‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಂದನ್, ಜಿಯಾವುಲ್ಲಾ ಖಾನ್, ಶರತ್ ಬಂಧಿತ ಆರೋಪಿಗಳು. ಬಾಡಿಗೆ ಮನೆ ನೋಡುವ ನೆಪದಲ್ಲಿ ಬಂದಿದ್ದ ದರೋಡೆಕೋರರು, ಬಾಡಿಗೆ ಮನೆ ಗಲೀಜಾಗಿದೆ ನೋಡಿ ಎಂದಿದ್ದರು. ಈ ವೇಳೆ ಮನೆಯೊಳಗೆ ಮಾಲಕಿ ಹೋದಾಗ ಕೈಕಾಲು ಕಟ್ಟಿದ್ರು. ಕೈಕಾಲು ಕಟ್ಟಿ 48 ಗ್ರಾಂ ಮಾಂಗಲ್ಯ ಸರ, ಓಲೆ ಕಿತ್ತು ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, 1.5 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್, ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಜು ಬಾರದೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಕೊಪ್ಪಳ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ. ರಘುನಾಥನ ಹಳ್ಳಿಯ ಕೆರೆಯಲ್ಲಿ ಸ್ನಾನಕ್ಜೆ ಹೋಗಿದ್ದ ಪಕ್ಕೀರಪ್ಪ, ಈಜು ಬಾರದೆ ಕೆರೆಯಲ್ಲಿ‌ ಮುಳುಗಿ ದುರ್ಮರಣ ಹೊಂದಿದ್ದಾನೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಧುನಿಕ ಶಕುಂತಲಾ ಕಥನ: ದಮನಕ್ಕೊಳಗಾದ ಹೆಣ್ಣುಮಕ್ಕಳಿಗೆ ನನ್ನ ಜೀವನ ಸ್ಫೂರ್ತಿಯಾಗಲಿ

ಎರಡು ಬೈಕ್​ಗಳ ನಡುವೆ ಅಪಘಾತ: ಓರ್ವ ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ರೈತ ಮುನಿವೆಂಕಟರಾಯಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕಾಲುವೆಗೆ ಬಿದ್ದು ಬಾಲಕ ಸಾವು:

ಕಾರವಾರ: ಮನೆಯ ಹಿಂಬದಿಯ ಕಾಲುವೆಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದಿದೆ. ವಿಜೇತ ಗಣಪತಿ ನಾಯಕ್ (4) ಸಾವನ್ನಪ್ಪಿದ ಬಾಲಕ. ನಿನ್ನೆ ತಮ್ಮ ಮನೆ ಹಿಂಬದಿಯ ಹಿತ್ತಲದಲ್ಲಿ ಆಟವಾಡುತ್ತಿದ್ದಾಗ ಕಾಲುವೆಗೆ ಬಾಲಕ ಬಿದ್ದಿದ್ದಾನೆ. ಕಾಲುವೆಗೆ ಬಿದ್ದು ತೀವ್ರ ನೀರು ಕುಡಿದು ಅಸ್ತವ್ಯಸ್ತತವಾಗಿದ್ದ ಬಾಲಕ, ಶಿರಾಲಿ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ