AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ

ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ
ಬಂಧಿತ ಆರೋಪಿಗಳು.
TV9 Web
| Edited By: |

Updated on: May 22, 2022 | 4:02 PM

Share

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ ಪ್ರಕರಣ ಹಿನ್ನೆಲೆ ಬೆಂಗಳೂರಿನ ನಂದಿನಿ ಲೇಔಟ್‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಂದನ್, ಜಿಯಾವುಲ್ಲಾ ಖಾನ್, ಶರತ್ ಬಂಧಿತ ಆರೋಪಿಗಳು. ಬಾಡಿಗೆ ಮನೆ ನೋಡುವ ನೆಪದಲ್ಲಿ ಬಂದಿದ್ದ ದರೋಡೆಕೋರರು, ಬಾಡಿಗೆ ಮನೆ ಗಲೀಜಾಗಿದೆ ನೋಡಿ ಎಂದಿದ್ದರು. ಈ ವೇಳೆ ಮನೆಯೊಳಗೆ ಮಾಲಕಿ ಹೋದಾಗ ಕೈಕಾಲು ಕಟ್ಟಿದ್ರು. ಕೈಕಾಲು ಕಟ್ಟಿ 48 ಗ್ರಾಂ ಮಾಂಗಲ್ಯ ಸರ, ಓಲೆ ಕಿತ್ತು ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, 1.5 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್, ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಜು ಬಾರದೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಕೊಪ್ಪಳ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ. ರಘುನಾಥನ ಹಳ್ಳಿಯ ಕೆರೆಯಲ್ಲಿ ಸ್ನಾನಕ್ಜೆ ಹೋಗಿದ್ದ ಪಕ್ಕೀರಪ್ಪ, ಈಜು ಬಾರದೆ ಕೆರೆಯಲ್ಲಿ‌ ಮುಳುಗಿ ದುರ್ಮರಣ ಹೊಂದಿದ್ದಾನೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಧುನಿಕ ಶಕುಂತಲಾ ಕಥನ: ದಮನಕ್ಕೊಳಗಾದ ಹೆಣ್ಣುಮಕ್ಕಳಿಗೆ ನನ್ನ ಜೀವನ ಸ್ಫೂರ್ತಿಯಾಗಲಿ

ಎರಡು ಬೈಕ್​ಗಳ ನಡುವೆ ಅಪಘಾತ: ಓರ್ವ ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ರೈತ ಮುನಿವೆಂಕಟರಾಯಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕಾಲುವೆಗೆ ಬಿದ್ದು ಬಾಲಕ ಸಾವು:

ಕಾರವಾರ: ಮನೆಯ ಹಿಂಬದಿಯ ಕಾಲುವೆಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದಿದೆ. ವಿಜೇತ ಗಣಪತಿ ನಾಯಕ್ (4) ಸಾವನ್ನಪ್ಪಿದ ಬಾಲಕ. ನಿನ್ನೆ ತಮ್ಮ ಮನೆ ಹಿಂಬದಿಯ ಹಿತ್ತಲದಲ್ಲಿ ಆಟವಾಡುತ್ತಿದ್ದಾಗ ಕಾಲುವೆಗೆ ಬಾಲಕ ಬಿದ್ದಿದ್ದಾನೆ. ಕಾಲುವೆಗೆ ಬಿದ್ದು ತೀವ್ರ ನೀರು ಕುಡಿದು ಅಸ್ತವ್ಯಸ್ತತವಾಗಿದ್ದ ಬಾಲಕ, ಶಿರಾಲಿ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!