AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಪೊಲೀಸರ ಬಲೆಗೆ

Crime News: ಟೆಕ್ಕಿ ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದರು. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ಇದೀಗ ಹನಿಟ್ರ್ಯಾಪ್ ಗ್ಯಾಂಗ್ ಖಾಕಿ ಬಲೆಗೆ ಬಿದ್ದಿದೆ.

Bengaluru: ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಪೊಲೀಸರ ಬಲೆಗೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 6:44 PM

Share

ಬೆಂಗಳೂರು: ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಒಂದು ಬೆಂಗಳೂರಿನಲ್ಲಿ ಖಾಕಿ ಬಲೆಗೆ ಬಿದ್ದಿದೆ. ಈ ಸಂಬಂಧ ಐವರು ಮೈಕೋ ಲೇಔಟ್ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗಾರೆಪಾಳ್ಯ ನಿವಾಸಿಯನ್ನು ಗ್ಯಾಂಗ್ ಹನಿಟ್ರ್ಯಾಪ್ ಮಾಡಿತ್ತು. ಟೆಕ್ಕಿಯೋರ್ವನ ಬಳಿ ಕಾರು, ಮೊಬೈಲ್, ಹಣ ಸುಲಿಗೆ ಮಾಡಿತ್ತು. ಟೆಕ್ಕಿ, ಸೂಪರ್ ಮಾರ್ಕೆಟ್​ಗೆ ತರಕಾರಿ ತರಲು ಹೋಗಿದ್ದಾಗ ಗ್ಯಾಂಗ್​ನ ಮಹಿಳೆ ಟೆಕ್ಕಿಗೆ ಪರಿಚಯವಾಗಿದ್ದಳು. ಬಳಿಕ, ಕುಟುಂಬಸ್ಥರನ್ನ ಪರಿಚಯಿಸಲು ಮಹಿಳೆ ಕರೆದೊಯ್ದಿದ್ದಳು.

ಟೆಕ್ಕಿಯನ್ನು ಮನೆಗೆ ಕರೆದೊಯ್ದಿದ್ದ ಆರೋಪಿ ಮಹಿಳೆ, ಬಳಿಕ ಟೆಕ್ಕಿ ಮನೆಯ ರೂಮ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಯೋಜನೆಯಂತೆ ಮನೆಗೆ ನುಗ್ಗಿದ ನಾಲ್ವರು ಆರೋಪಿಗಳು ರೂಮ್​​ನಲ್ಲಿದ್ದ ಟೆಕ್ಕಿ ಫೋಟೋ ತೆಗೆದು ಬ್ಲ್ಯಾಕ್​ಮೇಲ್ ಮಾಡಲು ತೊಡಗಿದ್ದರು. 10 ಲಕ್ಷ ರೂಪಾಯಿ ನೀಡುವಂತೆ ಯುವಕರು ಧಮ್ಕಿ ಹಾಕಿದ್ದರು. ಹಣ ನೀಡಲು ಒಪ್ಪದಿದ್ದ ವೇಳೆ ಗ್ಯಾಂಗ್​ ಸುಲಿಗೆ ಮಾಡಿತ್ತು. ಟೆಕ್ಕಿ ಬಳಿ ಇದ್ದ ಐಷಾರಾಮಿ ಕಾರು, 37 ಸಾವಿರ ನಗದು ಹಾಗೂ ಮೊಬೈಲ್​​ ಕಿತ್ತುಕೊಂಡು ಆರೋಪಿಗಳ ಗ್ಯಾಂಗ್ ಪರಾರಿಯಾಗಿತ್ತು. ಈ ಬಗ್ಗೆ ಟೆಕ್ಕಿ ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದರು. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ಇದೀಗ ಹನಿಟ್ರ್ಯಾಪ್ ಗ್ಯಾಂಗ್ ಖಾಕಿ ಬಲೆಗೆ ಬಿದ್ದಿದೆ.

ವಿಜಯಪುರ: ನಕಲಿ ಬಯೋ ಡೀಸೆಲ್ ಅಡ್ಡೆ ಮೇಲೆ ದಾಳಿ ನಕಲಿ ಬಯೋ ಡೀಸೆಲ್ ಮಾರಾಟ ಅಡ್ಡೆ ಮೇಲೆ ದಾಳಿ ಮಾಡಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಝಳಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಶೆಡ್​ನಲ್ಲಿ ನಕಲಿ ಬಯೋ ಡೀಸೆಲ್ ಮಾರುತ್ತಿದ್ದ ತಂಡದ ಮೇಲೆ ದಾಳಿ ಮಾಡಲಾಗಿದೆ. ದಾಳಿ ನಡೆಯುತ್ತಲೇ ಸ್ಥಳದಿಂದ ಆರೋಪಿಗಳು ಪರಾರಿ ಆಗಿದ್ದಾರೆ. ನಕಲಿ ಬಯೋ ಡೀಸೆಲ್ ತಯಾರಿಕೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ನಾಪತ್ತೆ ಆಗಿರುವ 4 ಮಕ್ಕಳು ಮಂಗಳೂರಿನತ್ತ ಪ್ರಯಾಣಿಸಿರುವ ಶಂಕೆ; ಏನೇನು ತರಬೇಕು ಎಂದು ಮಾಡಿದ್ದ ಪಟ್ಟಿ ಲಭ್ಯ

ಇದನ್ನೂ ಓದಿ: Bengaluru: ಪಿಎಸ್​ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ವಂಚನೆ

Published On - 5:01 pm, Mon, 11 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್