AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮರ್ಯಾದಾ ಹತ್ಯೆ:  ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ
ಹತ್ಯೆImage Credit source: Naidunia
ನಯನಾ ರಾಜೀವ್
|

Updated on: Jan 03, 2024 | 11:54 AM

Share

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಜೋಡಿ ಕೊಲೆ ನಡೆದ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕಲ್ಪಿಸಿದ್ದರು. ಸದ್ಯ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಘಟನೆ ಬಿಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯ ಪರೌಲಿ ಗ್ರಾಮದಲ್ಲಿ ನಡೆದಿದ್ದಾಗಿದೆ. ಇಲ್ಲಿ ವಾಸವಿರುವ 20 ವರ್ಷದ ಯುವತಿ ತನ್ನ ಜಾತಿಯವನೇ ಆದ ಯುವಕನನ್ನು ಪ್ರೀತಿಸುತ್ತಿದ್ದಳು.

ಮತ್ತಷ್ಟು ಓದಿ: ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು

ತಡರಾತ್ರಿ ಇಬ್ಬರೂ ಭೇಟಿಯಾಗಲು ಮುಂದಾಗಿದ್ದರು, ಆಕೆ ಯುವಕನ ಮನೆಗೆ ಹೋಗಿದ್ದಳು. ಅಷ್ಟರಲ್ಲಿ ಯುವತಿ ತಂದೆಗೆ ವಿಷಯ ತಿಳಿದುಬಂದಿತ್ತು. ಹುಡುಗಿಯ ತಂದೆ ಅಲ್ಲೇ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ, ಬಳಿಕ ಕುಟುಂಬದವರ ಜತೆ ಸೇರಿ ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ.

ಯುವತಿ ತಂದೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆ. ಪೋಷಕರು ಹಾಗೂ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

ಮಗಳು ಪಕ್ಕದ ಮನೆಯವನೊಂದಿಗೆ ಓಡಿಹೋಗಲು ನಿರ್ಧರಿಸಿದ್ದಳು, ನಾನು ಅವಳ ಮೇಲೆ ಕಣ್ಣಿಟ್ಟಿದ್ದೆ. ಹಾಗೆಯೇ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತನನ್ನು ಭೇಟಿಯಾದಾಗ ಗುದ್ದಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ತಂದೆ ಒಪ್ಪಿಕೊಂಡಿದ್ದಾರೆ. ಪ್ರಿಯಕರ ಸಚಿನ್ ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಡಿಸೆಂಬರ್ 31ರಂದು ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!