AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮರ್ಯಾದಾ ಹತ್ಯೆ:  ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ
ಹತ್ಯೆImage Credit source: Naidunia
ನಯನಾ ರಾಜೀವ್
|

Updated on: Jan 03, 2024 | 11:54 AM

Share

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಜೋಡಿ ಕೊಲೆ ನಡೆದ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕಲ್ಪಿಸಿದ್ದರು. ಸದ್ಯ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಘಟನೆ ಬಿಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯ ಪರೌಲಿ ಗ್ರಾಮದಲ್ಲಿ ನಡೆದಿದ್ದಾಗಿದೆ. ಇಲ್ಲಿ ವಾಸವಿರುವ 20 ವರ್ಷದ ಯುವತಿ ತನ್ನ ಜಾತಿಯವನೇ ಆದ ಯುವಕನನ್ನು ಪ್ರೀತಿಸುತ್ತಿದ್ದಳು.

ಮತ್ತಷ್ಟು ಓದಿ: ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು

ತಡರಾತ್ರಿ ಇಬ್ಬರೂ ಭೇಟಿಯಾಗಲು ಮುಂದಾಗಿದ್ದರು, ಆಕೆ ಯುವಕನ ಮನೆಗೆ ಹೋಗಿದ್ದಳು. ಅಷ್ಟರಲ್ಲಿ ಯುವತಿ ತಂದೆಗೆ ವಿಷಯ ತಿಳಿದುಬಂದಿತ್ತು. ಹುಡುಗಿಯ ತಂದೆ ಅಲ್ಲೇ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ, ಬಳಿಕ ಕುಟುಂಬದವರ ಜತೆ ಸೇರಿ ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ.

ಯುವತಿ ತಂದೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆ. ಪೋಷಕರು ಹಾಗೂ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

ಮಗಳು ಪಕ್ಕದ ಮನೆಯವನೊಂದಿಗೆ ಓಡಿಹೋಗಲು ನಿರ್ಧರಿಸಿದ್ದಳು, ನಾನು ಅವಳ ಮೇಲೆ ಕಣ್ಣಿಟ್ಟಿದ್ದೆ. ಹಾಗೆಯೇ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತನನ್ನು ಭೇಟಿಯಾದಾಗ ಗುದ್ದಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ತಂದೆ ಒಪ್ಪಿಕೊಂಡಿದ್ದಾರೆ. ಪ್ರಿಯಕರ ಸಚಿನ್ ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಡಿಸೆಂಬರ್ 31ರಂದು ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!