AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮರ್ಯಾದಾ ಹತ್ಯೆ:  ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ
ಹತ್ಯೆImage Credit source: Naidunia
ನಯನಾ ರಾಜೀವ್
|

Updated on: Jan 03, 2024 | 11:54 AM

Share

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಜೋಡಿ ಕೊಲೆ ನಡೆದ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕಲ್ಪಿಸಿದ್ದರು. ಸದ್ಯ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಘಟನೆ ಬಿಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯ ಪರೌಲಿ ಗ್ರಾಮದಲ್ಲಿ ನಡೆದಿದ್ದಾಗಿದೆ. ಇಲ್ಲಿ ವಾಸವಿರುವ 20 ವರ್ಷದ ಯುವತಿ ತನ್ನ ಜಾತಿಯವನೇ ಆದ ಯುವಕನನ್ನು ಪ್ರೀತಿಸುತ್ತಿದ್ದಳು.

ಮತ್ತಷ್ಟು ಓದಿ: ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು

ತಡರಾತ್ರಿ ಇಬ್ಬರೂ ಭೇಟಿಯಾಗಲು ಮುಂದಾಗಿದ್ದರು, ಆಕೆ ಯುವಕನ ಮನೆಗೆ ಹೋಗಿದ್ದಳು. ಅಷ್ಟರಲ್ಲಿ ಯುವತಿ ತಂದೆಗೆ ವಿಷಯ ತಿಳಿದುಬಂದಿತ್ತು. ಹುಡುಗಿಯ ತಂದೆ ಅಲ್ಲೇ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ, ಬಳಿಕ ಕುಟುಂಬದವರ ಜತೆ ಸೇರಿ ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ.

ಯುವತಿ ತಂದೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆ. ಪೋಷಕರು ಹಾಗೂ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

ಮಗಳು ಪಕ್ಕದ ಮನೆಯವನೊಂದಿಗೆ ಓಡಿಹೋಗಲು ನಿರ್ಧರಿಸಿದ್ದಳು, ನಾನು ಅವಳ ಮೇಲೆ ಕಣ್ಣಿಟ್ಟಿದ್ದೆ. ಹಾಗೆಯೇ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತನನ್ನು ಭೇಟಿಯಾದಾಗ ಗುದ್ದಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ತಂದೆ ಒಪ್ಪಿಕೊಂಡಿದ್ದಾರೆ. ಪ್ರಿಯಕರ ಸಚಿನ್ ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಡಿಸೆಂಬರ್ 31ರಂದು ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ